7ಕ್ಕೂ ಹೆಚ್ಚು ಫಿರಂಗಿಗಳ ಮೂಲಕ ಮೈಸೂರು ದಸರಾ ಸಿಡಿಮದ್ದು ತಾಲೀಮು: ತುಸು ವಿಚಲಿತಗೊಂಡ ಶ್ರೀಕಂಠ, ಹೇಮಾವತಿ ಆನೆಗಳು
ದಸರಾ ಪ್ರಯುಕ್ತ ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಸೋಮವಾರ ಕುಶಾಲತೋಪು ತಾಲೀಮು ನಡೆಯಿತು. ಇದರಲ್ಲಿ ಒಟ್ಟು 14 ಆನೆಗಳು ಭಾಗಿಯಾದವು. ಅಭಿಮನ್ಯು, ಧನಂಜಯ, ಕಾವೇರಿ, ಲಕ್ಷ್ಮೀ, ಭೀಮ, ಏಕಲವ್ಯ, ರೂಪಾ, ಕಂಜನ್, ಮಹೇಂದ್ರ, ಪ್ರಶಾಂತ, ಶ್ರೀಕಂಠ, ಸುಗ್ರೀವ, ಗೋಪಿ, ಹೇಮಾವತಿ ಆನೆಗಳು ಭಾಗವಹಿಸಿದವು.
ಮೈಸೂರು, ಸೆಪ್ಟೆಂಬರ್ 15: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025 ಪ್ರಯುಕ್ತ ಅಶ್ವಾರೋಹಿ ದಳ ಮತ್ತು ಆನೆಗಳಿಗೆ ಸೋಮವಾರ ಸಿಡಿಮದ್ದು ತಾಲೀಮು ನಡೆಸಲಾಯಿತು. ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸಮ್ಮುಖದಲ್ಲಿ ಸಿಡಿಮದ್ದು ತಾಲೀಮು ನೆರವೇರಿತು. ಸಶಸ್ತ್ರ ಮೀಸಲು ಪಡೆ ಪೊಲೀಸರು 21 ಬಾರಿ ಕುಶಾಲತೋಪು ಸಿಡಿಸಿದರು. ಇದೇ ವೇಳೆ, ದಸರಾ ಆನೆಗಳಿಗೆ ವಸ್ತುಪ್ರದರ್ಶನ ಪ್ರಾಧಿಕಾರದಿಂದ ಪೂಜೆ ಸಲ್ಲಿಸಲಾಯಿತು. ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಪುಷ್ಪಾರ್ಚನೆ ಮಾಡಿದರು. ಶ್ರೀಕಂಠ, ಹೇಮಾವತಿ ಆನೆಗಳು ಸಿಡಿಮದ್ದು ಶಬ್ದಕ್ಕೆ ಸ್ವಲ್ಪ ವಿಚಲಿತಗೊಂಡವು. ಈ ಆನೆಗಳು ಇದೇ ಮೊದಲ ಬಾರಿಗೆ ದಸರಾಗೆ ಆಗಮಿಸಿವೆ. ಸಿಡಿಮದ್ದು ತಾಲೀಮಿಗೂ ಮುನ್ನ ದಸರಾ ಆನೆಗಳ ಮುಂದೆ ಭಾರಿ ಪಟಾಕಿಗಳನ್ನು ಸಿಡಿಸಿ ಆನೆಗಳನ್ನು ಸಿದ್ಧಗೊಳಿಸಲಾಗಿತ್ತು.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

