ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮಖ ಆಕರ್ಷಣೆ ಜಂಬೂ ಸವಾರಿಗೆ ಕೇವಲ ಮೂರು ದಿನ ಮಾತ್ರ ಉಳಿದರುವಂತೆಯೇ ಇದರಲ್ಲಿ ಭಾಗಿಯಾಗುವ ಅಭಿಮನ್ಯು ನೇತೃತ್ವದ ಆನೆಗಳು ಇಂದು ಬೆಳಗ್ಗೆ ಅರಮನೆ ಅವರಣದಲ್ಲಿ ಪುಷ್ಪಾರ್ಚನೆ ರಿಹರ್ಸಲ್ ನಲ್ಲಿ ಪಾಲ್ಗೊಂಡವು. ದೃಶ್ಯಗಳಲ್ಲಿ ಕಾಣುವ ಹಾಗೆ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ್ದು ಧನಂಜಯ ಹೆಸರಿನ ಆನೆ. ಉಳಿದ ಆನೆಗಳು ಅವನನ್ನು ಹಿಂಬಾಲಿಸಿ ಕ್ಯಾಪ್ಟನ್ ಅಭಿಮನ್ಯುಗೆ ಪುಷ್ಪಾರ್ಚನೆ ಮಾಡಿದವು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಜಾವಾ ಹವಾ, ಅರಮನೆಯಂಗಳದಲ್ಲಿ ರಂಗೋಲಿಯ ಚಿತ್ತಾರ: ಮೈಸೂರು ದಸರಾ 2ನೇ ದಿನ ಕಲರ್ ಫುಲ್