ಚಪ್ಪಲಿ ಹೊರಗಡೆ ಬಿಡಿ ಅಂದಿದಷ್ಟೇ: ತಂದೆ-ಮಗನಿಂದ ವೈದ್ಯನ ಮೇಲೆ ಮನಸೋ ಇಚ್ಛೆ ಹಲ್ಲೆ

Edited By:

Updated on: Dec 19, 2025 | 11:19 AM

ಚಪ್ಪಲಿ ಹೊರಗಡೆ ಬಿಟ್ಟು ಬರುವಂತೆ ಹೇಳಿದ್ದಕ್ಕೆ ತಂದೆ ಮತ್ತು ಮಗ ವೈದ್ಯರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ವೈದ್ಯ ಅನೂಪ್ ಮೇಲಿನ ಹಲ್ಲೆ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು, ಡಿಸೆಂಬರ್​​ 19: ಕ್ಷುಲ್ಲಕ ಕಾರಣಕ್ಕೆ ವೈದ್ಯನ ಮೇಲೆ ಅಪ್ಪ, ಮಗ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಕ್ಲಿನಿಕ್ ಹೊರಭಾಗ ಚಪ್ಪಲಿ ಬಿಟ್ಟು ಬನ್ನಿ ಅಂತಾ ಹೇಳಿದಕ್ಕೆ ಶಿಶು ಆಸ್ಪತ್ರೆಯ ವೈದ್ಯ ಡಾ.ಅನೂಪ್ ಮೇಲೆ ಹಲ್ಲೆ ನಡೆಸಲಾಗಿದೆ. ರುಬಿಯಾಜ್ ಷರೀಫ್, ಆತನ ತಂದೆ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ರುಬಿಯಾಜ್ ಷರೀಫ್​ರ 3 ವರ್ಷದ ಮಗು ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಆಸ್ಪತ್ರೆಗೆ ಆತ ಬಂದಿದ್ದ. ಈ ವೇಳೆ ಚಪ್ಪಲಿ ಧರಿಸಿಯೇ ಒಳಬಂದ ಹಿನ್ನೆಲೆ ಅದನ್ನು ಹೊರಗೆ ಬಿಡುವಂತೆ ವೈದ್ಯ ಅನೂಪ್ ಮನವಿ ಮಾಡಿದ್ದರು. ಚಪ್ಪಲಿ ಹೊರಗೆ ಬಿಡುವುದಿಲ್ಲ ಅಂತಾ ಗಲಾಟೆ ಮಾಡಿ ಹಲ್ಲೆ ನಡೆಸಲಾಗಿದೆ. ವೈದ್ಯ ಅನೂಪ್ ಮೇಲಿನ ಹಲ್ಲೆ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 19, 2025 11:19 AM