Loading video

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ: ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ

| Updated By: ಗಂಗಾಧರ​ ಬ. ಸಾಬೋಜಿ

Updated on: Feb 21, 2025 | 2:58 PM

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳಿಂದ ಬೆಂಕಿ ಹಚ್ಚಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬೇಸಿಗೆಯಿಂದ ಒಣಗಿರುವ ಕಾಡಿನಲ್ಲಿ ಬೆಂಕಿ ವೇಗವಾಗಿ ಹರಡುತ್ತಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುವಂತಾಗಿದೆ. ಈ ಘಟನೆಯಿಂದ ಪರಿಸರಕ್ಕೆ ಹಾನಿ ಉಂಟಾಗಿರುವ ಸಾಧ್ಯತೆಯಿದೆ.

ಮೈಸೂರು, ಫೆಬ್ರವರಿ 21: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ (fire) ಕಾಣಿಸಿಕೊಂಡಿರುವಂತಹ ಘಟನೆ ನಡೆದಿದೆ. ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಚಾಮುಂಡಿಬೆಟ್ಟದಲ್ಲಿ ಬೆಂಕಿ ಹೊತ್ತಿ ಉರಿದಿದೆ. ಬೇಸಿಗೆ ಆರಂಭವಾಗಿರುವುದರಿಂದ ಕಾಡು ಒಣಗಿದೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಹಾಸಹ ಪಡುವಂತಾಗಿದೆ. ಕರ್ನಾಟಕದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ತಾಪ ಹೆಚ್ಚಾಗಿದೆ. ಅರಣ್ಯ ಪ್ರದೇಶಗಳಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 21, 2025 02:50 PM