ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ: ವಿಡಿಯೋ ನೋಡಿ

Updated By: ಗಂಗಾಧರ​ ಬ. ಸಾಬೋಜಿ

Updated on: May 31, 2025 | 11:06 AM

ಮೈಸೂರಿನ ಕೆ.ಆರ್. ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯನ್ನು ಅಪಮಾನ ಮಾಡಿದ ಘಟನೆ ನಡೆದಿದೆ. ವ್ಯಕ್ತಿಯೋರ್ವ ಪ್ರತಿಮೆಯ ಮೇಲೆ ಕುಳಿತು ಅವಮಾನಕರವಾಗಿ ವರ್ತಿಸಿದ್ದಾನೆ. ಈ ಘಟನೆಯಿಂದಾಗಿ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ. ದೇವರಾಜ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ ಮತ್ತು ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

ಮೈಸೂರು, ಮೇ 31: ನಾಲ್ವಡಿ ಕೃಷ್ಣರಾಜ ಒಡೆಯರ್ (Krishna Raja Wadiyar) ಪ್ರತಿಮೆ ಮೇಲೆ ಕುಳಿತುಕೊಂಡಿದ್ದಲ್ಲದೇ ಅವರ ಬಾಯಿಗೆ ಬೀಡಿ ಇಟ್ಟು ವ್ಯಕ್ತಿಯೋರ್ವ ವಿಕೃತವಾಗಿ ವರ್ತಿಸಿರುವಂತಹ ಘಟನೆ ನಗರದ ಕೆ.ಆರ್​.ವೃತ್ತದಲ್ಲಿ ನಡೆದಿದೆ. ವ್ಯಕ್ತಿಯ ಹುಚ್ಚಾಟ ಕಂಡು ಕೆಲ ಕಾಲ ಜನರು ಗಾಬರಿಯಾಗಿದ್ದರು. ಸದ್ಯ ಪರಾರಿಯಾಗಿರುವ ವ್ಯಕ್ತಿಯ ಪತ್ತೆಗೆ ದೇವರಾಜ ಠಾಣೆ ಪೊಲೀಸರು ಮುಂದಾಗಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.