ಸಿಎಂ ತವರು ಜಿಲ್ಲೆಯಲ್ಲಿ ಡಿಕೆ ಶಿವಕುಮಾರ್ ಪರ ಧ್ವನಿ: ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ

Updated By: ಗಂಗಾಧರ​ ಬ. ಸಾಬೋಜಿ

Updated on: Nov 30, 2025 | 12:34 PM

ಕರ್ನಾಟಕದಲ್ಲಿ ಕಾಂಗ್ರೆಸ್ ಕುರ್ಚಿ ಕದನ ತೀವ್ರಗೊಂಡಿರುವ ಬೆನ್ನಲ್ಲೇ, ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಹಜರತ್ ಸಯ್ಯದ್ ಗಮನ್ ಷಾ ಖಾದ್ರಿ ದರ್ಗಾದಲ್ಲಿ ಡಿಕೆ ಶಿವಕುಮಾರ್​ ಬೆಂಬಲಿಗರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಡಿಯೋ ನೋಡಿ.

ಮೈಸೂರು, ನವೆಂಬರ್ 30: ರಾಜ್ಯ ರಾಜಕೀಯದಲ್ಲಿ ಕುರ್ಚಿ ಕದನಕ್ಕೆ ನಿನ್ನೆ ತಾತ್ಕಾಲಿಕವಾಗಿ ತೆರೆ ಬಿದ್ದಿದೆ. ಆದರೆ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಡಿ.ಕೆ.ಶಿವಕುಮಾರ್​ ಮುಖ್ಯಮಂತ್ರಿ ಆಗಬೇಕೆಂಬ ಧ್ವನಿ ಮುಂದುವರೆದಿದೆ. ಈ ಬೆಳವಣಿಗೆಯ ಭಾಗವಾಗಿ, ಡಿ.ಕೆ.ಶಿವಕುಮಾರ್ ಪರವಾಗಿ ಮುಸ್ಲಿಮರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮೈಸೂರಿನ ಹಜರತ್ ಸಯ್ಯದ್ ಗಮನ್ ಷಾ ಖಾದ್ರಿ ದರ್ಗಾದಲ್ಲಿ ಡಿಕೆ ಶಿವಕುಮಾರ್​​ ಬೆಂಬಲಿಗರು ಒಗ್ಗೂಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Nov 30, 2025 09:55 AM