ಸಿಎಂ ಸಿದ್ದರಾಮಯ್ಯ ತವರಲ್ಲೇ ಹೆಚ್‌.ಸಿ ಮಹದೇವಪ್ಪ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಲೇ ಇರುತ್ತವೆ. ಇದೀಗ ಸಿಎಂ ಸಿದ್ದರಾಮಯ್ಯನವರ ತವರಲ್ಲೇ ಹೆಚ್‌.ಸಿ ಮಹದೇವಪ್ಪ ಅವರ ಬೆಂಬಲಿಗರು ಮುಂದಿನ ಸಿಎಂ ಮಹದೇವಪ್ಪ ಸಾಹೇಬ್ರು ಎಂದು ಘೋಷಣೆಯನ್ನು ಕೂಗಿದ್ದಾರೆ. ಈ ಬಳಿಕ ಮಾತನಾಡಿದ ಮಹದೇವಪ್ಪ, ಸಿಎಂ ಕುರ್ಚಿ ಇರೋದೇ ಒಂದು ಅದರಲ್ಲಿ ಸಿದ್ಧರಾಮಯ್ಯನವರು ಭದ್ರವಾಗಿ ಕೂತಿದ್ದಾರೆ, 2028 ರ ವರೆಗೂ ಆ ಕುರ್ಚಿ ಭದ್ರವಾಗಿಯೇ ಇರಲಿದೆ ಎಂದು ಹೇಳಿದ್ದಾರೆ.

ಮೈಸೂರು, ಸೆಪ್ಟೆಂಬರ್‌ 20: ರಾಜ್ಯದಲ್ಲಿ ಸಿಎಂ ಬದಲಾವಣೆಯ ಕುರಿತ ಚರ್ಚೆಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಇದೀಗ ಮುಂದಿನ ಸಿಎಂ ಹೆಚ್‌.ಸಿ ಮಹದೇವಪ್ಪ (H.C Mahadevappa) ಎಂದು ಜನ ಘೋಷಣೆ ಕೂಗಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯನವರ ತವರಲ್ಲೇ ಹೆಚ್‌.ಸಿ ಮಹದೇವಪ್ಪನವರ ಬೆಂಬಲಿಗರಿ ಮುಂದಿನ ಸಿಎಂ ಮಹದೇವಪ್ಪ ಸಾಹೇಬ್ರು ಎಂದು ಜೋರಾಗಿ ಘೋಷಣೆಯನ್ನು ಕೂಗಿದ್ದಾರೆ. ಇರೋದು ಒಂದೇ ಕುರ್ಚಿ ಅದರಲ್ಲಿ ಸಿಎಂ ಸಿದ್ದರಾಮಯ್ಯ ಭದ್ರವಾಗಿ ಕುಳಿತಿದ್ದಾರೆ. ಬಳಿಕ ಮಾತನಾಡಿದ ಅವರು 2028 ರ ವರೆಗೂ ಆ ಕುರ್ಚಿ ಭದ್ರವಾಗಿಯೇ ಇರುತ್ತೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us