AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru: ಬೆಂಗಳೂರಲ್ಲಿ ಐವರು ಉಗ್ರರು ಸೆರೆಸಿಕ್ಕ ನಂತರ ಮೈಸೂರು ನಗರದಲ್ಲಿ ಪೊಲೀಸ್ ಕಟ್ಟೆಚ್ಚರ, ರಾತ್ರಿ ಗಸ್ತು ಹೆಚ್ಚಿಸಿದ ಆಯುಕ್ತರು

Mysuru: ಬೆಂಗಳೂರಲ್ಲಿ ಐವರು ಉಗ್ರರು ಸೆರೆಸಿಕ್ಕ ನಂತರ ಮೈಸೂರು ನಗರದಲ್ಲಿ ಪೊಲೀಸ್ ಕಟ್ಟೆಚ್ಚರ, ರಾತ್ರಿ ಗಸ್ತು ಹೆಚ್ಚಿಸಿದ ಆಯುಕ್ತರು

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 21, 2023 | 11:10 AM

ನರಸಿಂಹರಾಜ ವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಮತ್ತು ಪ್ರಮುಖ ರಸ್ತೆಗಳಲ್ಲಿ ಗಸ್ತು ತಿರುಗುವಂತೆ ಆಯುಕ್ತರು ಸೂಚಿಸಿದ್ದಾರೆ.

ಮೈಸೂರು: ಬೆಂಗಳೂರಲ್ಲಿ ಮಂಗಳವಾರ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ದಳದ ಅಧಿಕಾರಿಗಳು (CCB Sleuths) ವಶಕ್ಕೆ ಪಡೆದ ಬಳಿಕ ರಾಜ್ಯದ ಎಲ್ಲ ಪ್ರಮುಖ ನಗರಗಳಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಿದೆ. ಮೈಸೂರು ನಗರ ಪೊಲೀಸ್ ಆಯುಕ್ತ (Mysuru police commissioner) ರಮೇಶ್ ಬಾನೋಟ್ (Ramesh Bhanot) ಸಿಬ್ಬಂದಿ ಜೊತೆ ಮಾತಾಡಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ಜಾಗರೂಕಾರಗಿರಬೇಕೆಂದು ಸೂಚನೆ ನೀಡಿದ್ದಾರೆ. ಗುರುವಾರ ರಾತ್ರಿ ಆಯುಕ್ತರು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯೊಡನೆ ಮಾತಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಯಾವುದಾದರೂ ವ್ಯಕ್ತಿ ಅಥವಾ ಗುಂಪಿನ ನಡವಳಿಕೆ ಅನುಮಾನಾಸ್ಪದವಾಗಿ ಕಂಡರೆ ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆ ಅವರು ಸೂಚಿಸಿದ್ದಾರೆ. ರಾತ್ರಿ ಕಾವಲನ್ನು ಹೆಚ್ಚಿಸುವಂತೆ ಎಲ್ಲ ಠಾಣೆಗಳ ಇನ್ಸ್ ಪೆಕ್ಟರ್ ಗಳಿಗೆ ನಿರ್ದೇಶನ ನೀಡಲಾಗಿದೆ. ನರಸಿಂಹರಾಜ ವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಮತ್ತು ಪ್ರಮುಖ ರಸ್ತೆಗಳಲ್ಲಿ ಗಸ್ತು ತಿರುಗುವಂತೆ ಆಯುಕ್ತರು ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ