ಸಿಎಂ ಪುತ್ರ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆಯೇ ಬ್ಲಾಕ್: ಕಾದುಕಾದು ಸುಸ್ತಾದ ಸವಾರರು
ಮೈಸೂರಿನ ಎಂಸಿ ಹುಂಡಿ ಬಳಿ ಸಿಎಂ ಪುತ್ರ ಡಾ. ಯತೀಂದ್ರ ಅವರ ಬೃಹತ್ ಕಟೌಟ್ ನಿಲ್ಲಿಸಲು ಮೈಸೂರು-ಟಿ ನರಸೀಪುರ ರಸ್ತೆಯನ್ನು ತಡೆಹಿಡಿಯಲಾಯಿತು. ಇದರಿಂದಾಗಿ ಹಲವು ವಾಹನಗಳು ರಸ್ತೆಯಲ್ಲೇ ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಯಿತು. ಈ ಅನಗತ್ಯ ರಸ್ತೆ ತಡೆ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಮೈಸೂರು, ಫೆಬ್ರವರಿ 19: ಸಿಎಂ ಸಿದ್ದರಾಮಯ್ಯ ಪುತ್ರ, ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆಯನ್ನೇ ಬ್ಲಾಕ್ ಮಾಡಿದ ಪ್ರಸಂಗವೊಂದು ಸಿಎಂ ಸ್ವಕ್ಷೇತ್ರ ವರುಣಾದಲ್ಲಿ ನಡೆದಿದೆ. ಮೈಸೂರು-ಟಿ ನರಸೀಪುರ ಮುಖ್ಯ ರಸ್ತೆಯ ಎಂಸಿ ಹುಂಡಿ ಬಳಿ ಸುಮಾರು 50 ಅಡಿ ಎತ್ತರದ ಕಟೌಟ್ ಅನ್ನು ಕಾಂಗ್ರೆಸ್ ಕಾರ್ಯಕರ್ತರು ನಿಲ್ಲಿಸುತ್ತಿದ್ದರು. ಈ ಹಿನ್ನೆಲೆ ರಸ್ತೆ ಬ್ಲಾಕ್ ಮಾಡಲಾಗಿದೆ. ಸುಮಾರು 20 ನಿಮಿಷ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ಈ ವೇಳೆ ಜನ ಆಕ್ರೋಶ ವ್ಯಕ್ತಪಡಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Feb 19, 2026 08:27 PM
Follow Us
Latest Videos
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ

