ಸಿಎಂ ಪುತ್ರ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆಯೇ ಬ್ಲಾಕ್: ಕಾದುಕಾದು ಸುಸ್ತಾದ ಸವಾರರು
ಮೈಸೂರಿನ ಎಂಸಿ ಹುಂಡಿ ಬಳಿ ಸಿಎಂ ಪುತ್ರ ಡಾ. ಯತೀಂದ್ರ ಅವರ ಬೃಹತ್ ಕಟೌಟ್ ನಿಲ್ಲಿಸಲು ಮೈಸೂರು-ಟಿ ನರಸೀಪುರ ರಸ್ತೆಯನ್ನು ತಡೆಹಿಡಿಯಲಾಯಿತು. ಇದರಿಂದಾಗಿ ಹಲವು ವಾಹನಗಳು ರಸ್ತೆಯಲ್ಲೇ ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಯಿತು. ಈ ಅನಗತ್ಯ ರಸ್ತೆ ತಡೆ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಮೈಸೂರು, ಫೆಬ್ರವರಿ 19: ಸಿಎಂ ಸಿದ್ದರಾಮಯ್ಯ ಪುತ್ರ, ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆಯನ್ನೇ ಬ್ಲಾಕ್ ಮಾಡಿದ ಪ್ರಸಂಗವೊಂದು ಸಿಎಂ ಸ್ವಕ್ಷೇತ್ರ ವರುಣಾದಲ್ಲಿ ನಡೆದಿದೆ. ಮೈಸೂರು-ಟಿ ನರಸೀಪುರ ಮುಖ್ಯ ರಸ್ತೆಯ ಎಂಸಿ ಹುಂಡಿ ಬಳಿ ಸುಮಾರು 50 ಅಡಿ ಎತ್ತರದ ಕಟೌಟ್ ಅನ್ನು ಕಾಂಗ್ರೆಸ್ ಕಾರ್ಯಕರ್ತರು ನಿಲ್ಲಿಸುತ್ತಿದ್ದರು. ಈ ಹಿನ್ನೆಲೆ ರಸ್ತೆ ಬ್ಲಾಕ್ ಮಾಡಲಾಗಿದೆ. ಸುಮಾರು 20 ನಿಮಿಷ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ಈ ವೇಳೆ ಜನ ಆಕ್ರೋಶ ವ್ಯಕ್ತಪಡಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Feb 19, 2026 08:27 PM
Latest Videos
