ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ: ಅದ್ಭುತ ವಿಡಿಯೋ ಇಲ್ಲಿದೆ

Edited By:

Updated on: May 14, 2025 | 9:33 AM

ಒಂದೆಡೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದರೆ, ಮತ್ತೊಂದಡೆ ಅಭಯಾರಣ್ಯಗಳಿಗೆ ಬಂದು ಅವುಗಳ ಸೌಂದರ್ಯ ಕಣ್ತುಂಬಿಕೊಳ್ಳುವ ಪ್ರವಾಸಿಗರ ಸಂಖ್ಯೆಗೇನೂ ಕಡಿಮೆ ಇಲ್ಲ. ಇದೀಗ ಎಚ್​ಡಿ ಕೋಟೆ ತಾಲ್ಲೂಕು ನಾಗರಹೊಳೆಯ ದಮ್ಮನ ಕಟ್ಟೆ ಸಫಾರಿ ಬಳಿ ಕಾಡಾನೆಗಳ ಹಿಂಡು ಚಿಗುರು ಹುಲ್ಲು ತಿನ್ನುತ್ತಿರುವ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.

ಮೈಸೂರು, ಮೇ 14: ಮೈಸೂರು ಜಿಲ್ಲೆಯ ಎಚ್​ಡಿ ಕೋಟೆ ತಾಲ್ಲೂಕು ನಾಗರಹೊಳೆಯ ದಮ್ಮನ ಕಟ್ಟೆ ಸಫಾರಿ ವೇಳೆ ಕಾಡಾನೆಗಳ ಹಿಂಡು ಚಿಗುರು ಹುಲ್ಲು ತಿನ್ನುತ್ತಿರುವ ಅದ್ಭುತ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ವನ್ಯಜೀವಿ ಛಾಯಾಗ್ರಹಕ ಜಿಎಸ್ ರವಿಶಂಕರ್ ಕ್ಯಾಮರಾದಲ್ಲಿ ಸೆರೆಯಾಗಿರುವ ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 14, 2025 09:31 AM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More