ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ

Edited By:

Updated on: Mar 12, 2025 | 9:17 PM

ಮೈಸೂರು ಮೃಗಾಲಯದಲ್ಲಿ ಬೇಸಿಗೆಯ ತೀವ್ರ ಬಿಸಿಲಿನಿಂದ ಪ್ರಾಣಿಗಳನ್ನು ರಕ್ಷಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೆಟ್ ಸ್ಪ್ರಿಂಕ್ಲರ್‌ಗಳು, ನೆರಳಿನ ವ್ಯವಸ್ಥೆ ಮತ್ತು ತಂಪಾದ ಹಣ್ಣುಗಳ ವಿತರಣೆಯ ಮೂಲಕ ಪ್ರಾಣಿಗಳಿಗೆ ತಂಪನ್ನು ಒದಗಿಸಲಾಗುತ್ತಿದೆ. ಹುಲಿ, ಸಿಂಹ, ಆನೆ ಮುಂತಾದ ಪ್ರಾಣಿಗಳಿಗೆ ತಂಪಾದ ವಾತಾವರಣದ ವ್ಯವಸ್ಥೆ ಮಾಡಲಾಗಿದೆ.

ಮೈಸೂರು, ಮಾರ್ಚ್​ 12: ಮೃಗಾಲಯದಲ್ಲಿರುವ (Z00) ಪ್ರಾಣಿ, ಪಕ್ಷಿಗಳಿಗೂ ಬೇಸಿಗೆ ಬಿಸಿ ತಟ್ಟಿದೆ. ಹೀಗಾಗಿ ಪ್ರಾಣಿಗಳನ್ನ ಕೂಲಾಗಿಡಲು ಮೃಗಾಲಯ ಸಿಬ್ಬಂದಿ ಮುಂದಾಗಿದ್ದು, ಜೆಟ್ ಸ್ಪ್ರಿಂಕ್ಲರ್ ಮೂಲಕ ಕೃತಕ ಮಳೆ ಸುರಿಸಿ ವಾತಾವರಣ ಕೂಲ್ ಮಾಡುವ ಪ್ರಯತ್ನ ಮಾಡಲಾಗಿದೆ. ಹುಲಿ, ಸಿಂಹ, ಕರಡಿ, ಆನೆ, ಗೊರಿಲ್ಲಗಳಿಗೆ ಮೈ ಮೇಲೆ ನೀರು ಬೀಳುವಂತೆ ವ್ಯವಸ್ಥೆ ಮಾಡಲಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More