ಗಣರಾಜ್ಯೋತ್ಸವದಂದು ರಾಜಪತ್​ನಲ್ಲಿ ನಡೆಯುವ ಪರೇಡ್​ನಲ್ಲಿ ಎನ್ ಸಿ ಸಿ ತಂಡದ ನೇತೃತ್ವವನ್ನು ಮೈಸೂರಿನ ಪ್ರಮೀಳಾ ಕುನಾವರ್ ವಹಿಸುತ್ತಾರೆ!

ಮೈಸೂರಿನ ಸೆಂಟ್ ಜೋಸೆಫ್ಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು ಎನ್ ಸಿ ಸಿ ಯಲ್ಲಿ ಸೀನಿಯರ್ ಆಂಡರ್ ಆಫೀಸರ್ (Senior Under Officer) ಆಗಿದ್ದಾರೆ. ರಾಜ್ಯದ ಸಾಂಸ್ಕೃತಿಕ ರಾಜಧಾನಿಯ ಒಟ್ಟು 19 ಕೆಡೆಟ್​ಗಳು ಇವರಲ್ಲಿ 10 ಯುವಕರು ಮತ್ತು 9 ಯುವತಿಯರು ಕರ್ನಾಟಕ ಮತ್ತು ಗೋವಾ ಎನ್ ಸಿ ಸಿ ಡೈರೆಕ್ಟೋರೇಟ್ ಪಡೆಯನ್ನು ಪ್ರತಿನಿಧಿಸುತ್ತಿದ್ದಾರೆ.

ಗಣರಾಜ್ಯೋತ್ಸವದಂದು ರಾಜಪತ್​ನಲ್ಲಿ ನಡೆಯುವ ಪರೇಡ್​ನಲ್ಲಿ ಎನ್ ಸಿ ಸಿ ತಂಡದ ನೇತೃತ್ವವನ್ನು ಮೈಸೂರಿನ ಪ್ರಮೀಳಾ ಕುನಾವರ್ ವಹಿಸುತ್ತಾರೆ!
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jan 24, 2022 | 7:19 PM

ಗಣರಾಜ್ಯೋತ್ಸವ (Republic Day) ಸಂಭ್ರಮನ್ನು ಭಾರತ ಎದುರುನೋಡುತ್ತಿದೆ, ಮಂಗಳವಾರ ಕಳೆದು ಬುಧವಾರ ಸೂರ್ಯ ಉದಯಿಸುತ್ತಿರುವಂತೆಯೇ, ರಾಷ್ಟ್ರದೆಲ್ಲೆಡೆ ಸಡಗರ ಶುರುವಾಗುತ್ತದೆ. ದೆಹಲಿಯಲ್ಲಿ ಬುಧವಾರ ಬೆಳಗ್ಗೆ ರಾಜಪತ್ ನಲ್ಲಿ ನಡೆಯುವ ರಿಪಬ್ಲಿಕ್ ಡೇ ಪರೇಡ್ ನಲ್ಲಿ ನಮ್ಮ ಮೈಸೂರು ಹುಡುಗಿ ಪ್ರಮೀಳಾ ಕುನಾವರ ಅವರು ಎನ್ ಸಿ ಸಿ (NCC) ಪಡೆಯ ನೇತೃತ್ವ ವಹಿಸಲಿದ್ದಾರೆ. ಕನ್ನಡಿಗರಿಗೆಲ್ಲ ಹೆಮ್ಮೆಯ ಸಂಗತಿ ಇದು. ಅಂದಹಾಗೆ ಮೈಸೂರಿನ ಸೆಂಟ್ ಜೋಸೆಫ್ಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು ಎನ್ ಸಿ ಸಿ ಯಲ್ಲಿ ಸೀನಿಯರ್ ಆಂಡರ್ ಆಫೀಸರ್ (Senior Under Officer) ಆಗಿದ್ದಾರೆ. ರಾಜ್ಯದ ಸಾಂಸ್ಕೃತಿಕ ರಾಜಧಾನಿಯ ಒಟ್ಟು 19 ಕೆಡೆಟ್ಗಳು ಇವರಲ್ಲಿ 10 ಯುವಕರು ಮತ್ತು 9 ಯುವತಿಯರು ಕರ್ನಾಟಕ ಮತ್ತು ಗೋವಾ ಎನ್ ಸಿ ಸಿ ಡೈರೆಕ್ಟೋರೇಟ್ ಪಡೆಯನ್ನು ಪ್ರತಿನಿಧಿಸುತ್ತಿದ್ದಾರೆ. ದೆಹಲಿಯಲ್ಲಿ ಪ್ರತಿವರ್ಷ ಗಣರಾಜ್ಯೋತ್ಸವ ಕ್ಯಾಂಪ್ಗಾಗಿ ಭಾರತದ 17 ಡೈರೆಕ್ಟೋರೇಟ್ಗಳಿಂದ ಕೆಡೆಟ್ ಗಳನ್ನು ಆಯ್ಕೆಮಾಡಲಾಗುತ್ತದೆ. ಕ್ಯಾಂಪ್​ನಲ್ಲಿ ಇವರು ವ್ಯಾಯಾಮ, ಸಾಂಸ್ಕೃತಿಕ ಚಟುವಟಿಕೆಗಳು, ಫ್ಯಾಗ್ ಏರಿಯಾ ಮತ್ತು ಬೆಸ್ಟ್ ಕೆಡೆಟ್ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾರೆ.

ಕೋವಿಡ್-19 ಪಿಡುಗಿನಿಂದಾಗಿ ಕಳೆದ ವರ್ಷ ಮತ್ತು ಈ ವರ್ಷ ಎನ್ ಸಿ ಸಿ ಕ್ಯಾಂಪ್ಗೆ ಆಯ್ಕೆ ಮಾಡುವ ಕೆಡೆಟ್ಗಳ ಸಂಖ್ಯೆಯನ್ನು ಅರ್ಧದಷ್ಟು ಕಡಿಮೆ ಮಾಡಲಾಗಿದೆ. ಪ್ರಸಕ್ತ ವರ್ಷ ಕರ್ನಾಟಕ ಮತ್ತು ಗೋವಾ ಡೈರೆಕ್ಟೋರೇಟ್ ನಿಂದ ಒಟ್ಟು 54 ಕೆಡೆಟ್ಗಳನ್ನು ಆಯ್ಕೆ ಮಾಡಲಾಗಿದ್ದು ಅವರೆಲ್ಲ 2 ತಿಂಗಳ ಹಿಂದೆಯೇ ದೆಹಲಿ ತಲುಪಿಯಾಗಿದೆ. ಎನ್ ಸಿ ಸಿ ಮೈಸೂರು ಗ್ರೂಪ್ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಎಲ್ಲ ಕೆಡೆಟ್ ಗಳು ಗಣರಾಜ್ಯೋತ್ಸವ ದಿನದ ಪರೇಡ್ ಮತ್ತು ಸ್ಪರ್ಧೆಗಳಿಗಾಗಿ ದೆಹಲಿಯಲ್ಲಿ ಅಭ್ಯಾಸನಿರತರಾಗಿದ್ದಾರೆ.

‘ಕರ್ನಾಟಕ ಮತ್ತು ಗೋವಾ ಡೈರೆಕ್ಟೋರೇಟ್ ಗೆ ಆಯ್ಕೆಯಾಗಿರುವ 54 ಕೆಡೆಟ್​ಗಳ ಪೈಕಿ 19 ಕೆಡೆಟ್​ಗಳು ಮೈಸೂರು ಗ್ರೂಪ್ ನವರಾಗಿರುವುದು ಹೆಮ್ಮೆಯ ಸಂಗತಿ. ಇದೊಂದು ಆದ್ಭುತವಾದ ಸಾಧನೆ. ಮೈಸೂರು ಕೆಡೆಟ್ಗಳು ಪಡುವ ಪರಿಶ್ರಮ ಮತ್ತು ಉತ್ಸಾಹಕ್ಕೆ ಇದು ಸಾಕ್ಷಿಯಾಗಿದೆ. ಕಳೆದ ಎರಡು ತಿಂಗಳುಗಳಿಂದ ಈ ಕೆಡೆಟ್ ದೆಹಲಿಯಲ್ಲಿದ್ದು ಬೇರೆ ಬೇರೆ ವಿಭಾಗಗಳಲ್ಲಿ ತರಬೇತಿ ಪಡಯುತ್ತಿದ್ದಾರೆ. ಮೈಸೂರು ಗ್ರೂಪ್ ಅತ್ಯಂತ ಗರ್ವ ಮತ್ತು ಹೆಮ್ಮೆಯಿಂದ ಹೇಳಬಯಸುವ ವಿಷಯವೆಂದರೆ ನಮ್ಮ 5 ಮಹಿಳಾ ಕೆಡೆಟ್​ಗಳು ರಾಜಪತ್ ನಲ್ಲಿ ಜನೆವರಿ 26 ರಂದು ನಡೆಯುವ ಪರೇಡ್ ಭಾಗವಾಗಲು ಆಯ್ಕೆಯಾಗಿದ್ದು ಪರೇಡ್ ನಲ್ಲಿ ಮಹಿಳಾ ತಂಡದ ನೇತೃತ್ವವನ್ನು ಪ್ರಮೀಳಾ ಕುನಾವರ್ ವಹಿಸಲಿದ್ದಾರೆ,’ ಎಂದು ಮೈಸೂರು ಗ್ರೂಪ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:   ಸಾಕು ನಾಯಿಯನ್ನು ಉಳಿಸಲು ತನ್ನ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿ; ಅಷ್ಟಕ್ಕೂ ಮುಂದೆ ಆಗಿದ್ದೇನು ಇಲ್ಲಿದೆ ವೈರಲ್ ವಿಡಿಯೋ

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್