ನಬಾರ್ಡ್ ಸಾಲದ ಮೊತ್ತ ಅರ್ಧದಷ್ಟು ಇಳಿಕೆ, ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿರುವ ಸಿಎಂ

Edited By: ಅರುಣ್​ ಕುಮಾರ್​ ಬೆಳ್ಳಿ

Updated on: Nov 20, 2024 | 2:08 PM

ಹೇಗೂ ದೆಹಲಿಗೆ ಹೊಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡನ್ನೂ ಭೇಟಿಯಾಗುವರೇ? ನಾಳೆ ಸಾಯಂಕಾಲವೇ ಅವರು ಬೆಂಗಳೂರಿಗೆ ವಾಪಸ್ಸು ಬರಬೇಕಿರುವುದರಿಂದ ವರಿಷ್ಠರನ್ನು ಭೇಟಿಯಾಗುವುದು ಸಾಧ್ಯವಾಗಲಾರದು, ಆದರೆ ಸಮಯ ಸಿಕ್ಕರೆ ಅವರನ್ನು ಭೇಟಿಯಾಗುವುದಾಗಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕಾರಣಗಳಿಗಾಗಿ ಇಂದು ಸಾಯಂಕಾಲ ದೆಹಲಿಗೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ ದೆಹಲಿಯಲ್ಲಿ ನಂದಿನಿ ಉತ್ಪನ್ನ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿರಬೇಕಾಗಿರುವುದು ಮೊದಲ ಕಾರಣವಾದರೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯಕ್ಕೆ ಸಿಗುತ್ತಿದ್ದ ಸಾಲದ ಮೊತ್ತವನ್ನು ಶೇಕಡ 58ರಷ್ಟು ಕಡಿಮೆ ಮಾಡಿರುವುದನ್ನು ಚರ್ಚಿಸುವುದು ಎರಡನೇ ಕಾರಣವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಸಿದ್ದರಾಮಯ್ಯ ತನಗೆ ನಿವೇಶನಗಳು ಬೇಡವೆಂದಿದ್ದರು ಎಂದ ಮುಡಾ ಮಾಜಿ ಅಧ್ಯಕ್ಷ ಧ್ರುವಕುಮಾರ್

Follow Us
TV9 Web

TV9 Kannada

Read More