ನಾಗರ ಪಂಚಮಿ: 15 ಅಡಿ ಉದ್ದದ ಹಾವು ಪ್ರತ್ಯಕ್ಷ, ಆತಂಕಗೊಂಡ ಕುಟುಂಬಸ್ಥರು

Edited By:

Updated on: Aug 21, 2023 | 7:18 PM

ಸೋಮವಾರದಂದು ಜಿಲ್ಲಾದ್ಯಂತ ನಾಗರ ಪಂಚಮಿ ಹಬ್ಬದ ಸಡಗರ ಮನೆ ಮಾಡಿತ್ತು. ಈ ವೇಳೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರ ಗ್ರಾಮದ ತೋಟದ ಮನೆಯೊಂದರಲ್ಲಿ ಸುಮಾರು 15 ಅಡಿ ಉದ್ದದ ಕೆರೆ ಹಾವು ಪ್ರತ್ಯಕ್ಷವಾಗಿದ್ದು, ಜನರು ಆತಂಕಗೊಂಡಿದ್ದರು.

ಬಾಗಲಕೋಟೆ, ಆಗಸ್ಟ್​​ 21: ಸೋಮವಾರದಂದು ಜಿಲ್ಲಾದ್ಯಂತ ನಾಗರ ಪಂಚಮಿ ಹಬ್ಬದ ಸಡಗರ ಮನೆ ಮಾಡಿತ್ತು. ಈ ವೇಳೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರ ಗ್ರಾಮದ ತೋಟದ ಮನೆಯೊಂದರಲ್ಲಿ ಸುಮಾರು 15 ಅಡಿ ಉದ್ದದ ಕೆರೆ ಹಾವು (snake) ಪ್ರತ್ಯಕ್ಷವಾಗಿದ್ದು, ಜನರು ಆತಂಕಗೊಂಡಿದ್ದರು. ನಾಗನಗೌಡ ಪಾಟೀಲ ಎಂಬುವವರ ತೋಟದ ಮನೆಯಲ್ಲಿ ಹಾವು ಪ್ರತ್ಯಕ್ಷವಾಗಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ಬಾಬುಸಾಬ ನದಾಫ್​ ಹಾವು ಸೆರೆಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ನಾಗರಪಂಚಮಿ ದಿನ ಹಾವು ಕಂಡು ಕುಟುಂಬಸ್ಥರು ಆತಂಕಗೊಂಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More