‘ಸೆಲೆಬ್ರಿಟಿಗಳಿಗೆ ಬೇರೆ ನ್ಯಾಯಾನಾ? ಅಪಘಾತ ಮಾಡಿ ಸಾಯಿಸಿದ ಆ ನಟನನ್ನು ಜೈಲಿಗೆ ಹಾಕಿ’: ಪುತ್ರನ ಅಳಲು

Updated on: Oct 01, 2023 | 3:12 PM

Nagabhushan Car Accident: ‘ನಾವು ತಪ್ಪು ಮಾಡಿದರೆ ನಮ್ಮನ್ನು ಜೈಲಿಗೆ ಹಾಕ್ತೀರಿ ಅಲ್ವಾ? ಆ ವ್ಯಕ್ತಿಯನ್ನೂ ಜೈಲಿಗೆ ಹಾಕಿ. ಸೆಲೆಬ್ರಿಟಿಗಳಿಗೆ ಬೇರೆ ರೂಲ್ಸ್​ ಇದೆಯಾ? ಒಬ್ಬರನ್ನು ಸಾಯಿಸಿದ ತಪ್ಪಿಗೆ ಏನು ಶಿಕ್ಷೆ ಆಗುತ್ತಲ್ಲ ಅದೇ ರೀತಿ ಈ ನಟನಿಗೆ ಜೈಲು ಶಿಕ್ಷೆ ಆಗಬೇಕು’ ಎಂದು ಮೃತ ಮಹಿಳೆಯ ಪುತ್ರ ಪಾರ್ಥ ಅವರು ಮಾಧ್ಯಮಗಳ ಎದುರು ಕಣ್ಣೀರು ಹಾಕಿದ್ದಾರೆ.

ನಟ ನಾಗಭೂಷಣ್ (Nagabhushan) ಅವರ ಕಾರು ಅಪಘಾತದಿಂದ (Nagabhushan Car Accident) ಪಾದಚಾರಿ ಪ್ರೇಮಾ ಎಸ್​. ಮೃತಪಟ್ಟಿದ್ದಾರೆ. ಪ್ರೇಮಾ ಪತಿ ಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ. ತಾಯಿಯನ್ನು ಕಳೆದುಕೊಂಡು ಪ್ರೇಮಾ ಅವರ ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಮಾಧ್ಯಮಗಳ ಎದುರಿನಲ್ಲಿ ಪುತ್ರ ಪಾರ್ಥ ಹೇಳಿಕೆ ನೀಡಿದ್ದಾರೆ. ‘ಅಪಘಾತ ಮಾಡಿದ್ದು ಒಬ್ಬ ನಟ ಅಂತ ಹೇಳ್ತಾ ಇದ್ದಾರೆ. ಅದು ನಮಗೆ ಬೇಕಿಲ್ಲ. ನಮಗೆ ನ್ಯಾಯ ಬೇಕು. ನಾವು ತಪ್ಪು ಮಾಡಿದರೆ ನಮ್ಮನ್ನು ಜೈಲಿಗೆ ಹಾಕ್ತೀರಿ ಅಲ್ವಾ? ಆ ವ್ಯಕ್ತಿಯನ್ನೂ ಜೈಲಿಗೆ ಹಾಕಿ. ಸೆಲೆಬ್ರಿಟಿಗಳಿಗೆ ಬೇರೆ ರೂಲ್ಸ್​ ಇದೆಯಾ? ಒಬ್ಬರನ್ನು ಸಾಯಿಸಿದ ತಪ್ಪಿಗೆ ಏನು ಶಿಕ್ಷೆ ಆಗುತ್ತಲ್ಲ ಅದೇ ರೀತಿ ಈ ನಟನಿಗೆ ಜೈಲು ಶಿಕ್ಷೆ ಆಗಬೇಕು. ನಮಗೆ ಪರಿಹಾರ ಬೇಕಿಲ್ಲ. ದುಡ್ಡಿಗಾಗಿ ನಾವು ಬಂದಿಲ್ಲ. ಕಷ್ಟದಲ್ಲಿ ಬೆಳೆದ ನಮಗೆ ದುಡಿಯುವುದು ಗೊತ್ತಿದೆ’ ಎಂದು ಪಾರ್ಥ ಅವರು ಅಳಲು ತೋಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More