ರಮ್ಯಾ ಬದಲು ರಚಿತಾ ರಾಮ್: ಪ್ರೇಕ್ಷಕರು ಇದನ್ನು ಒಪ್ಪಿಕೊಳ್ತಾರಾ? ನಾಗಶೇಖರ್ ಹೇಳಿದ್ದಿಷ್ಟು

‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ಈಗಾಗಲೇ 60 ದಿನಗಳ ಶೂಟಿಂಗ್​ ಮಾಡಲಾಗಿದೆ. ಕೊನೆಯ ಹಂತದ 12 ದಿನಗಳ ಶೂಟಿಂಗ್​ ನಡೆಯುತ್ತಿದೆ. ನಿರ್ದೇಶಕ ನಾಗಶೇಖರ್​ ಅವರು ಕ್ಲೈಮ್ಯಾಕ್ಸ್​ ದೃಶ್ಯದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಚಿತ್ರೀಕರಣದ ಸೆಟ್​ನಲ್ಲಿ ಮಾತಿಗೆ ಸಿಕ್ಕ ಅವರು ಒಂದಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್​ ಮುಂತಾದವರು ನಟಿಸುತ್ತಿದ್ದಾರೆ.

ರಮ್ಯಾ ಬದಲು ರಚಿತಾ ರಾಮ್: ಪ್ರೇಕ್ಷಕರು ಇದನ್ನು ಒಪ್ಪಿಕೊಳ್ತಾರಾ? ನಾಗಶೇಖರ್ ಹೇಳಿದ್ದಿಷ್ಟು
|

Updated on: Jul 19, 2024 | 10:21 PM

ನಾಗಶೇಖರ್​ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಸಂಜು ವೆಡ್ಸ್​ ಗೀತಾ 2’ ಚಿತ್ರಕ್ಕೆ ಕ್ಲೈಮ್ಯಾಕ್ಸ್​ ಚಿತ್ರೀಕರಣ ಮಾಡಲಾಗುತ್ತಿದೆ. ‘ಸಂಜು ವೆಡ್ಸ್​ ಗೀತಾ’ ಸಿನಿಮಾದಲ್ಲಿ ಇದ್ದ ಮೂಡ್​ ಈಗ ಪಾರ್ಟ್​ 2ರಲ್ಲೂ ಮುಂದುವರಿಯಲಿದೆ ಎಂದು ನಾಗಶೇಖರ್​ ಹೇಳಿದ್ದಾರೆ. ಈ ಸಿನಿಮಾದಲ್ಲಿ ಹಾಡುಗಳು ತುಂಬ ಚೆನ್ನಾಗಿ ಮೂಡಿಬಂದಿವೆ ಎಂದು ಅವರು ಹೇಳಿದ್ದಾರೆ. ಒಂದು ಹಾಡು ಹಾಗೂ ಕ್ಲೈಮ್ಯಾಕ್ಸ್​ ಫೈಟ್​ ಚಿತ್ರೀಕರಣ ಬಾಕಿ ಇದೆ. 12 ದಿನಗಳಲ್ಲಿ ಆ ಚಿತ್ರೀಕರಣ ಮುಗಿಸಲು ಗುರಿ ಇಟ್ಟುಕೊಳ್ಳಲಾಗಿದೆ. ಶ್ರೀನಗರ ಕಿಟ್ಟಿ, ರಚಿತಾ ರಾಮ್​, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಸಂಜು ವೆಡ್ಸ್​ ಗೀತಾ’ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಮತ್ತು ರಮ್ಯಾ ನಟಿಸಿದ್ದರು. ಆದರೆ 2ನೇ ಪಾರ್ಟ್​ನಲ್ಲಿ ನಾಯಕಿಯಾಗಿ ರಮ್ಯಾ ಬದಲು ರಚಿತಾ ರಾಮ್​ ನಟಿಸಿದ್ದಾರೆ. ‘ರಚಿತಾ ರಾಮ್​ ಕೂಡ ಚೆನ್ನಾಗಿ ಅಭಿನಯಿಸಿದ್ದಾರೆ. ಈ ಪಾತ್ರದಲ್ಲಿ ರಚಿತಾ ಅವರನ್ನು ಪ್ರೇಕ್ಷಕರು ಖಂಡಿತಾ ಒಪ್ಪಿಕೊಳ್ಳುತ್ತಾರೆ’ ಎಂದು ನಾಗಶೇಖರ್​ ಭರವಸೆ ವ್ಯಕ್ತಪಡಿಸಿದ್ದಾರೆ. ಗಿಡ ನೆಡುವ ಮೂಲಕ ಸಿನಿಮಾದ ಶೂಟಿಂಗ್​ ಪೂರ್ಣಗೊಳಿಸಲು ಚಿತ್ರತಂಡ ನಿರ್ಧರಿಸಿದೆ. ‘ಗಿಡ ನೆಡುವುದು ನನಗೆ ಬಹಳ ಇಷ್ಟ. ಹಾಗಾಗಿ ಗಿಡ ನೆಡುವ ಮೂಲಕ ನಾನು ಶೂಟಿಂಗ್​ ಮುಗಿಸಲಿದ್ದೇನೆ’ ಎಂದು ನಾಗಶೇಖರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ
ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ
ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ
ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್
ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!
ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!
ಸಾವಿರಾರೂ ದೂರಿನ ಹಾರದೊಂದಿಗೆ ಕಲೆಕ್ಟರ್ ಕಚೇರಿಗೆ ಉರುಳಿಕೊಂಡು ಬಂದ ವ್ಯಕ್ತಿ
ಸಾವಿರಾರೂ ದೂರಿನ ಹಾರದೊಂದಿಗೆ ಕಲೆಕ್ಟರ್ ಕಚೇರಿಗೆ ಉರುಳಿಕೊಂಡು ಬಂದ ವ್ಯಕ್ತಿ