Padma Vibhushan Awardee SM Krishna: ಹಿರಿಯ ಮುತ್ಸದ್ದಿ ನಿವಾಸಕ್ಕೆ ಭೇಟಿ ನೀಡಿ ಸತ್ಕರಿಸಿದ ನಳಿನ್ ಕುಮಾರ್ ಕಟೀಲ್ ಮತ್ತು ಬಿಎಲ್ ಸಂತೋಷ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 04, 2023 | 11:35 AM

ಸಂತೋಷ್ ಮತ್ತು ನಳಿನ್ ಮನೆಯೊಳಗೆ ಬರುತ್ತಿದ್ದಂತೆಯೇ ಕೃಷ್ಣ ಅವರು ಬೋಕೆಗಳನ್ನು ನೀಡಿ ಸ್ವಾಗತಿಸಿದರು. ಬಳಿಕ ಮನೆ ಒಳಭಾಗದಲ್ಲಿ ನಳಿನ್ ಅವರು ಕೃಷ್ಣ ಅವರಿಗೆ ಬೋಕೆ ನೀಡಿ, ಶಾಲು ಹೊದೆಸಿ, ಪೇಟ ತೊಡಿಸಿ ಸನ್ಮಾನಿಸಿದರು.

ಬೆಂಗಳೂರು:  ಪದ್ಮವಿಭೂಷಣ ಪ್ರಶಸ್ತಿಯಿಂದ ಗೌರವಿಸಲ್ಪಟ್ಟಿರುವ ರಾಷ್ಟ್ರ ರಾಜಕಾರಣದ ಹಿರಿಯ ಮುತ್ತದ್ದಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಎಸ್ ಎಮ್ ಕೃಷ್ಣ (SM Krishna) ಅವರ ನಿವಾಸಕ್ಕೆ ಶನಿವಾರ ಬೆಳಗ್ಗೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ (BL Santosh) ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಭೇಟಿ ನೀಡಿ ಶ್ರೀಯುತರನ್ನು ಸನ್ಮಾನಿಸಿದರು. ಸಂತೋಷ್ ಮತ್ತು ನಳಿನ್ ಮನೆಯೊಳಗೆ ಬರುತ್ತಿದ್ದಂತೆಯೇ ಕೃಷ್ಣ ಅವರು ಬೋಕೆಗಳನ್ನು ನೀಡಿ ಸ್ವಾಗತಿಸಿದರು. ಬಳಿಕ ಮನೆ ಒಳಭಾಗದಲ್ಲಿ ನಳಿನ್ ಅವರು ಕೃಷ್ಣ ಅವರಿಗೆ ಬೋಕೆ ನೀಡಿ, ಶಾಲು ಹೊದೆಸಿ, ಪೇಟ ತೊಡಿಸಿ ಸನ್ಮಾನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.