ಕೋಲಾರ, ಸೆ.17: ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ರೈತರ ಬೆಳೆ ನಾಶ ಹಿನ್ನೆಲೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲ್ ಕಾಲಿಗೆ ಬಿದ್ದು ರೈತರೊಬ್ಬರು ಕಣ್ಣೀರಿಟ್ಟಿದ್ದಾರೆ. ಹೌದು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೇತಗಾನಹಳ್ಳಿಗೆ ನಳಿನ್ ಕುಮಾರ್ ಕಟೀಲ್(Nalin Kumar Kateel) ಭೇಟಿ ನೀಡಿದ್ದರು. ಈ ವೇಳೆ ಘಟನೆ ನಡೆದಿದ್ದು, ರೈತರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಮಾಧಾನಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕಟೀಲ್ಗೆ ಸಂಸದ ಮುನಿಸ್ವಾಮಿ, ಎಂಎಲ್ಸಿ ಎನ್.ರವಿಕುಮಾರ್ ಸಾಥ್ ನೀಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ