AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್ ಆರೋಪ, ವೈರಲ್ ಆಗ್ತಿದೆ ವಿಡಿಯೋ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್ ಆರೋಪ, ವೈರಲ್ ಆಗ್ತಿದೆ ವಿಡಿಯೋ

ನವೀನ್ ಕುಮಾರ್ ಟಿ
| Edited By: |

Updated on:Nov 10, 2025 | 10:31 AM

Share

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಹಜ್ ಯಾತ್ರೆಗೆ ಬೀಳ್ಕೊಡಲು ಬಂದವರು ಸಾಮೂಹಿಕ ನಮಾಜ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆ ಸಂಬಂಧಿತ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಏರ್‌ಪೋರ್ಟ್‌ನಂತಹ ಸಾರ್ವಜನಿಕ ಸ್ಥಳಗಳಲ್ಲಿ ಇಂಥದ್ದಕ್ಕೆ ಅವಕಾಶ ನೀಡಬಾರದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ವಿಮಾನ ನಿಲ್ದಾಣ ಆಡಳಿತವಾಗಲೀ ಅಥವಾ ಇತರ ಸಂಬಂಧಪಟ್ಟವರಾಗಲಿ ಈ ಬಗ್ಗೆ ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ.

ಬೆಂಗಳೂರು, ನವೆಂಬರ್ 10: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಸಾಮೂಹಿಕ ನಮಾಜ್ ಮಾಡಿರುವ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಹರಿದಾಡಿದೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹಜ್ ಯಾತ್ರಿಕರನ್ನು ಬೀಳ್ಕೊಡಲು ಬಂದಿದ್ದ ಕೆಲವರು ವಿಮಾನ ನಿಲ್ದಾಣದ ಟರ್ಮಿನಲ್ ಒಳಭಾಗದಲ್ಲೇ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಾಮೂಹಿಕ ನಮಾಜ್ ನಡೆಯುತ್ತಿದ್ದರೂ ಸಿಬ್ಬಂದಿ ನೋಡುತ್ತಾ ಮೌನವಾಗಿದ್ದರು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ ನಿಲ್ದಾಣ ಆಡಳಿತದಿಂದ ಈ ಬಗ್ಗೆ ಇನ್ನಷ್ಟೇ ಅಧಿಕೃತ ಪ್ರತಿಕ್ರಿಯೆ ದೊರೆಯಬೇಕಿದೆ.

ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ನಮಾಜ್ ಮಾಡಿದ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ್ದು, ಆ ಬಗ್ಗೆ ನನಗೆ ಮಾಹಿತಿ ಇಲ್ಲ, ಈ ಮಾಹಿತಿ ಪಡೆಯುತ್ತೇನೆ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 10, 2025 06:48 AM
Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More