ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿಸುವವರ ಹೆಸರುಗಳು ಮಾತ್ರ ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್: ಲಕ್ಷ್ಮಿ ಹೆಬ್ಬಾಳ್ಕರ್
ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಸಿಎಂ ಕುರ್ಚಿಗಾಗಿ ಹಿರಿಯ ನಾಯಕರ ನಡುವೆ ಪೈಪೋಟಿ ನಡೆದಿದೆ ಎಂಬ ವದಂತಿಯನ್ನು ತಳ್ಳಿಹಾಕಿದ ಲಕ್ಷ್ಮಿ ಹೆಬ್ಬಾಳ್ಕರ್, ಅಂಥದ್ದೇನೂ ಇಲ್ಲ, ಕಾಂಗ್ರೆಸ್ ಒಂದು ಶಿಸ್ತಿನ ಪಕ್ಷ ಮತ್ತು ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳಿದರು.
ತುಮಕೂರು: ಗೃಹಲಕ್ಷ್ಮಿ ಯೋಜನೆ ಅಡಿ ಅರ್ಹ ಫಲಾನುಭವಿಗಳ ಪೈಕಿ ಒಬ್ಬರ ಹೆಸರು ಕೂಡ ಡಿಲೀಟ್ ಆಗಿಲ್ಲ, ಪ್ರಾಯಶಃ ಜಿಎಸ್ ಟಿ ಮತ್ತು ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವವರ ಹೆಸರುಗಳು ಮಾತ್ರ ಡಿಲೀಟ್ ಆಗಿರಬಹುದು, ಗಮನಿಸಬೇಕಾದ ಸಂಗತಿಯೇನೆಂದರೆ, ಅರ್ಹರಲ್ಲದ ಮಹಿಳೆಯರ ಹೆಸರುಗಳು ಹೆಸರುಗಳು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಸಮಯದಲ್ಲೇ ತಿರಸ್ಕೃತಗೊಂಡಿರುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಹೇಳದೆ ಆ ಯವ್ವ ಏನೇನೋ ಮಾತಾಡ್ತಾರೆ ಎಂದು ಟೀಕಿಸಿದ ರಮೇಶ್ ಜಾರಕಿಹೊಳಿ
Loading...
Unable to load recommendations.
Follow Us