AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಸೆ. 7ರಿಂದ ಮತ್ತೇ ಸಂಚಾರ ಆರಂಭಿಸಲಿದೆ ನಮ್ಮ ಮೆಟ್ರೋ

[lazy-load-videos-and-sticky-control id=”FwahkoyonL4″] ಬೆಂಗಳೂರು: ಬೆಂಗಳೂರಿಗರಿಗೆ ಕೊನೆಗೂ ಸಿಕ್ಕಿದೆ ಸಿಹಿ ಸುದ್ದಿ. ಲಾಕ್‌ಡೌನ್‌ನಂತರ ಸಂಚಾರವನ್ನು ಸ್ಥಗೀತಗೊಳಿಸಿದ್ದ ನಮ್ಮ ಮೆಟ್ರೋ ಈಗ ಮತ್ತೇ ಪುನಾರಂಭಗೊಳ್ಳುತ್ತಿದೆ. ಹೌದು ನಮ್ಮ ಮೆಟ್ರೋ ಮತ್ತೇ ಸೆಪ್ಟೆಂಬರ್ 7ರಿಂದ ಸಂಚಾರ ಆರಂಭಿಸುತ್ತಿದೆ. ಮೊದಲ ನಾಲ್ಕು ದಿನ ಅಂದ್ರೆ ಸೆಪ್ಟೆಂಬರ್‌ 7ರಿಂದ 10ರವರೆಗೆ ನೇರಳೆ ಮಾರ್ಗದಲ್ಲಿ ಸಂಚಾರ ಆರಂಭವಾಗುತ್ತೆ. ಇದಾದ ನಂತರ ಸೆಪ್ಟೆಂಬರ್ 9 ಮತ್ತು 10ರಂದು ಹಸಿರು ಮಾರ್ಗದಲ್ಲಿ ಓಡಾಟ ಆರಂಭಿಸುತ್ತೆ. ಮೊದಲು ಬೆಳಗ್ಗೆ 8ರಿಂದ ಬೆಳಗ್ಗೆ 11 ಗಂಟೆವರೆಗೆ ಮತ್ತು ಸಂಜೆ 4.30ರಿಂದ ಸಂಜೆ […]

ಕೊನೆಗೂ ಸೆ. 7ರಿಂದ ಮತ್ತೇ ಸಂಚಾರ ಆರಂಭಿಸಲಿದೆ ನಮ್ಮ ಮೆಟ್ರೋ
Guru
| Edited By: |

Updated on:Sep 03, 2020 | 9:49 AM

Share

[lazy-load-videos-and-sticky-control id=”FwahkoyonL4″]

ಬೆಂಗಳೂರು: ಬೆಂಗಳೂರಿಗರಿಗೆ ಕೊನೆಗೂ ಸಿಕ್ಕಿದೆ ಸಿಹಿ ಸುದ್ದಿ. ಲಾಕ್‌ಡೌನ್‌ನಂತರ ಸಂಚಾರವನ್ನು ಸ್ಥಗೀತಗೊಳಿಸಿದ್ದ ನಮ್ಮ ಮೆಟ್ರೋ ಈಗ ಮತ್ತೇ ಪುನಾರಂಭಗೊಳ್ಳುತ್ತಿದೆ.

ಹೌದು ನಮ್ಮ ಮೆಟ್ರೋ ಮತ್ತೇ ಸೆಪ್ಟೆಂಬರ್ 7ರಿಂದ ಸಂಚಾರ ಆರಂಭಿಸುತ್ತಿದೆ. ಮೊದಲ ನಾಲ್ಕು ದಿನ ಅಂದ್ರೆ ಸೆಪ್ಟೆಂಬರ್‌ 7ರಿಂದ 10ರವರೆಗೆ ನೇರಳೆ ಮಾರ್ಗದಲ್ಲಿ ಸಂಚಾರ ಆರಂಭವಾಗುತ್ತೆ. ಇದಾದ ನಂತರ ಸೆಪ್ಟೆಂಬರ್ 9 ಮತ್ತು 10ರಂದು ಹಸಿರು ಮಾರ್ಗದಲ್ಲಿ ಓಡಾಟ ಆರಂಭಿಸುತ್ತೆ.

ಮೊದಲು ಬೆಳಗ್ಗೆ 8ರಿಂದ ಬೆಳಗ್ಗೆ 11 ಗಂಟೆವರೆಗೆ ಮತ್ತು ಸಂಜೆ 4.30ರಿಂದ ಸಂಜೆ 7.30ರವರೆಗೆ ಮೆಟ್ರೋ ಓಡಾಟವಿರುತ್ತೆ. ಪ್ರತಿ 5 ನಿಮಿಷಗಳ ಅಂತರದಲ್ಲಿ ಮೆಟ್ರೋ ರೈಲುಗಳ ಸಂಚಾರ ಇರಲಿದೆ. ಸೆ.11ರಿಂದ ಹಸಿರು ಮತ್ತು ನೇರಳೆ ಎರಡೂ ಮಾರ್ಗಗಳಲ್ಲಿ ಓಡಾಟ ಶುರವಾಗಲಿದ್ದು, ಬೆಳಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಮೆಟ್ರೋ ರೈಲು ಓಡಾಟ ನಡೆಸಲಿದೆ.

ಈ ಸಂಬಂಧ ಪ್ರಯಾಣಿಕರಿಗೆ ಕೆಲವೊಂದು ಸೂಚನೆ ನೀಡಿರುವ BMRCL, ಮಾಸ್ಕ್‌, ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಅವಕಾಶ. ಪ್ರಯಾಣಿಕರು ಕಡ್ಡಾಯವಾಗಿ ಎರಡು ಮೀಟರ್ ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಹಾಗೇನೆ ಪ್ರತಿ ರೈಲಿನಲ್ಲಿ 400 ಪ್ರಯಾಣಿಕರಿಗೆ ಮಾತ್ರ ಅವಕಾಶ ಇರಲಿದೆ ಎಂದು ಹೇಳಿದೆ.

ಇಷ್ಟೇ ಅಲ್ಲ ಪ್ರಯಾಣಿಕರು BMRCL ಸೂಚಿಸಿದ ಸ್ಥಳದಲ್ಲಿ ನಿಂತು ಪ್ರಯಾಣಿಸಬೇಕು. ಪ್ರತಿ ನಿಲ್ದಾಣದಲ್ಲಿ 60 ಸೆಕೆಂಡ್ ಮಾತ್ರ ರೈಲು ನಿಲ್ಲುತ್ತದೆ. ಹತ್ತು ವರ್ಷಕ್ಕಿಂತ ಕಡಿಮೆ, 65 ವರ್ಷಕ್ಕಿಂತ ಮೇಲ್ಪಟ್ಟವರು ಅಗತ್ಯಬಿದ್ದರೆ ಮಾತ್ರ ಮೆಟ್ರೋದಲ್ಲಿ ಸಂಚರಿಸಲು ಅವಕಾಶ ಇರಲಿದೆ ಎಂದು ನಮ್ಮ ಮೆಟ್ರೋ ಗೈಡ್‌ಲೈನ್ಸ್‌ನಲ್ಲಿ ತಿಳಿಸಿದೆ.

Press Release_K 02092020

Published On - 11:53 pm, Wed, 2 September 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!