‘ಬಾಯಿನೇ ಮುಚ್ಚಲ್ವಲ್ಲ ಗುರು, ಅವಳು ಯಾರು ಡಾಮಿನೇಟ್ ಮಾಡೋಕೆ’ ತನಿಷಾ ಮೇಲೆ ನಮ್ರತಾ ಕೋಪ

Updated on: Oct 28, 2023 | 2:19 PM

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ತನಿಷಾ ಹಾಗೂ ನಮ್ರತಾ ಮಧ್ಯೆ ಘನಘೋರ ಜಗಳ ನಡೆದಿದೆ. ತನಿಷಾ ಡಾಮಿನೇಟ್ ಮಾಡುತ್ತಾರೆ ಎನ್ನುವ ಆರೋಪ ಮೊದಲಿನಿಂದಲೂ ಇದೆ. ಇದೇ ವಿಚಾರಕ್ಕೆ ತನಿಷಾ ವಿರುದ್ಧ ನಮ್ರತಾ ಕೋಪಗೊಂಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ತನಿಷಾ ಹಾಗೂ ನಮ್ರತಾ (Namratha Gowda) ಮಧ್ಯೆ ಘನಘೋರ ಜಗಳ ನಡೆದಿದೆ. ತನಿಷಾ ಡಾಮಿನೇಟ್ ಮಾಡುತ್ತಾರೆ ಎನ್ನುವ ಆರೋಪ ಮೊದಲಿನಿಂದಲೂ ಇದೆ. ಇದೇ ವಿಚಾರಕ್ಕೆ ತನಿಷಾ ವಿರುದ್ಧ ನಮ್ರತಾ ಕೋಪಗೊಂಡಿದ್ದಾರೆ. ‘ಒಂದು ನಿಮಿಷನೂ ಅವಳು ಬಾಯೇ ಮುಚ್ಚಲ್ವಲ್ಲ. ಎಲ್ಲರ ಮೇಲೆ ಡಾಮಿನೇಟ್ ಮಾಡೋಕೆ ಅವಳು ಯಾರು’ ಎಂದು ನಮ್ರತಾ ಕೂಗಾಡಿದ್ದಾರೆ. ಮನೆಯವರು ನಮ್ರತಾನ ಸಮಾಧಾನ ಮಾಡೋಕೆ ಹೋದರೂ ಅದು ಸಾಧ್ಯವಾಗಲೇ ಇಲ್ಲ. ವೀಕೆಂಡ್ ಎಪಿಸೋಡ್ ಕಲರ್ಸ್ ಕನ್ನಡದಲ್ಲಿ ರಾತ್ರಿ 9 ಗಂಟೆಗೆ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಹಾಗೂ ಲೈವ್ ವೀಕ್ಷಿಸಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Oct 28, 2023 02:18 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More