ವಿನಯ್​​ನ ವಹಿಸಿಕೊಂಡು ಬಂದ ಸ್ನೇಹಿತ್​ಗೆ ನಮ್ರತಾ ಖಡಕ್ ಪ್ರಶ್ನೆ; ಮರುಮಾತೇ ಇಲ್ಲ

|

Updated on: Jan 17, 2024 | 8:38 AM

ಯಾರು ಗೆಲ್ಲಬೇಕು ಎನ್ನುವ ವಿಚಾರ ಬಂದಾಗ ಸ್ನೇಹಿತ್ ಅವರು ವಿನಯ್ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ತಮ್ಮ ಹೆಸರನ್ನು ಏಕೆ ತೆಗೆದುಕೊಂಡಿಲ್ಲ ಎನ್ನುವ ಬಗ್ಗೆ ನಮ್ರತಾ ಪ್ರಶ್ನೆ ಮಾಡಿದ್ದಾರೆ.

ವಿನಯ್ ಗೌಡ ಅವರ ಜೊತೆ ಸ್ನೇಹಿತ್ ಅವರು ಒಳ್ಳೆಯ ಫ್ರೆಂಡ್​ಶಿಪ್ ಇಟ್ಟುಕೊಂಡಿದ್ದರು. ಎಲಿಮಿನೇಟ್ ಆಗಿ ಹೊರಗೆ ಹೋದ ಬಳಿಕವೂ ಇದನ್ನು ಅವರು ಮರೆತಿಲ್ಲ. ಎಲಿಮಿನೇಟ್ ಆದ ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಈ ವೇಳೆ ಯಾರು ಗೆಲ್ಲಬೇಕು ಎನ್ನುವ ವಿಚಾರ ಬಂದಾಗ ಸ್ನೇಹಿತ್ (Snehith Gowda) ಅವರು ವಿನಯ್ ಹೆಸರನ್ನು ತೆಗೆದುಕೊಂಡಿದ್ದಾರೆ. ತಮ್ಮ ಹೆಸರನ್ನು ಏಕೆ ತೆಗೆದುಕೊಂಡಿಲ್ಲ ಎನ್ನುವ ಬಗ್ಗೆ ನಮ್ರತಾ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸ್ನೇಹಿತ್ ಉತ್ತರಿಸಿದ್ದಾರೆ. ಆ ಬಳಿಕ ನಮ್ರತಾ (Namratha Gowda) ಮತ್ತೆ ಪ್ರಶ್ನೆ ಕೇಳಿದ್ದಾರೆ. ಅವರು ಕೇಳುತ್ತಿದ್ದ ಪ್ರಶ್ನೆಗಳಿಗೆ ಸ್ನೇಹಿತ್ ಅವರಿಗೆ ಏನು ಹೇಳಬೇಕು ಅನ್ನೋದೇ ಗೊತ್ತಾಗಲಿಲ್ಲ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಇಂದು (ಜನವರಿ 17) ಈ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us on