‘ವಿನಯ್​ಗೆ ಕ್ಯಾಪ್ಟನ್​ ಆಗುವ ಅರ್ಹತೆ ಇಲ್ಲ’; ನಮ್ರತಾ ಮಾತಿನಿಂದ ನೊಂದುಕೊಂಡ ವಿನಯ್​ ಗೌಡ

ಮೊದಲಿಗೆ ವಿನಯ್​ ಗೌಡ ಮತ್ತು ನಮ್ರತಾ ಗೌಡ ಅವರು ಬಹಳ ಕ್ಲೋಸ್​ ಆಗಿದ್ದರು. ಆದರೆ ಈಗ ಇಬ್ಬರ ನಡುವೆ ಬಿರುಕು ಮೂಡಿದೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಪ್ರೋಮೋ ರಿಲೀಸ್​ ಆಗಿದೆ. ದಿನದಿಂದ ದಿನಕ್ಕೆ ಬಿಗ್​ ಬಾಸ್​ ಮನೆಯಲ್ಲಿ ಪೈಪೋಟಿಯ ಕಾವು ಹೆಚ್ಚಾಗುತ್ತಿದೆ. ಸ್ಪರ್ಧಿಗಳ ನಿಜವಾದ ಬಣ್ಣ ಏನು ಎಂಬುದು ಗೊತ್ತಾಗುತ್ತಿದೆ.

‘ವಿನಯ್​ಗೆ ಕ್ಯಾಪ್ಟನ್​ ಆಗುವ ಅರ್ಹತೆ ಇಲ್ಲ’; ನಮ್ರತಾ ಮಾತಿನಿಂದ ನೊಂದುಕೊಂಡ ವಿನಯ್​ ಗೌಡ
|

Updated on: Nov 30, 2023 | 5:41 PM

ಬಿಗ್​ ಬಾಸ್ (Bigg Boss Kannada) ಆಟದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳು ಕೂಡ ಅಲ್ಲ. ಪರಿಸ್ಥಿತಿಗೆ ತಕ್ಕಂತೆ ಎಲ್ಲರೂ ಬದಲಾಗುತ್ತಾರೆ. ಕಷ್ಟದ ಸಂದರ್ಭದಲ್ಲಿ ಯಾರಿಂದಲಾದರೂ ಸಹಾಯ ಸಿಗುತ್ತೆ ಎಂದು ನಿರೀಕ್ಷಿಸುವುದು ಕೂಡ ಕಷ್ಟ. ಆ ಸತ್ಯ ಈಗ ವಿನಯ್​ ಗೌಡ ಅವರಿಗೆ ಅರ್ಥ ಆಗಿದೆ. ಅದನ್ನು ಅವರು ನೇರವಾಗಿಯೇ ಹೇಳಿದ್ದಾರೆ. 8ನೇ ವಾರದಲ್ಲಿ ಕ್ಯಾಪ್ಟನ್​ ಆಗಲು ಅರ್ಹರಲ್ಲದವರ ಹೆಸರನ್ನು ಹೇಳುವಂತೆ ನಮ್ರತಾಗೆ ಬಿಗ್​ ಬಾಸ್​ ಕಡೆಯಿಂದ ಆದೇಶ ಬಂತು. ಆಗ ಅವರು ವಿನಯ್​ ಗೌಡ (Vinay Gowda) ಹೆಸರನ್ನು ಹೇಳಿದರು. ಇದರಿಂದ ವಿನಯ್​ಗೆ ಶಾಕ್​ ಆಯಿತು. ‘ವಿನಯ್​ ಅವರನ್ನು ಕ್ಯಾಪ್ಟನ್ಸಿ ಓಟದಿಂದ ಹೊರಗೆ ಇಡುತ್ತೇನೆ. ಕೋಪದಲ್ಲಿ ಅವರು ಅಗ್ರೆಸಿವ್​ ನಿರ್ಧಾರ ತೆಗೆದುಕೊಳ್ಳುತ್ತಾರೆ. ಮಾತನಾಡುವಾಗ ಬೇರೆಯವರಿಗೆ ನೋವಾಗುತ್ತದೆ ಎಂಬುದನ್ನು ಕೂಡ ಅವರು ಯೋಚಿಸುವುದಿಲ್ಲ’ ಎಂದು ನಮ್ರತಾ (Namratha Gowda) ಕಾರಣ ನೀಡಿದರು. ಇದನ್ನು ಕೇಳಿ ವಿನಯ್​ಗೆ ಬೇಸರ ಆಯಿತು. ಈ ಸಂಚಿಕೆ ನವೆಂಬರ್​ 30ರ ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ದಲ್ಲಿ ಪ್ರಸಾರ ಆಗಲಿದೆ. ದಿನದ 24 ಗಂಟೆಯೂ ‘ಜಿಯೋ ಸಿನಿಮಾ’ದಲ್ಲಿ ಉಚಿತವಾಗಿ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’