Puneeth Rajkumar: ನಾವು ಒಂದೇ ತಾಯಿ ಮಕ್ಕಳಲ್ಲದಿದ್ದರೂ ಸೋದರರಂತಿದ್ದೆವು; ನಂದಮೂರಿ ಬಾಲಕೃಷ್ಣ ಕಂಬನಿ

| Updated By: shivaprasad.hs

Updated on: Oct 30, 2021 | 1:26 PM

Nandamuri Balakrishna | Prabhudeva: ಟಾಲಿವುಡ್ ನಟರಾದ ನಂದಮೂರಿ ಬಾಲಕೃಷ್ಣ ಹಾಗೂ ಪ್ರಭುದೇವ ಪುನೀತ್ ರಾಜಕುಮಾರ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ತೆಲುಗು ನಟರಾದ ನಂದಮೂರಿ ಬಾಲಕೃಷ್ಣ ಹಾಗೂ ಪ್ರಭುದೇವ ಪುನೀತ್ ಅವರ ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದ್ದಾರೆ. ಪುನೀತ್ ಪಾರ್ಥಿವ ಶರೀರ ನೋಡಿ ಬಾಲಕೃಷ್ಣ ಕಂಬನಿ ಮಿಡಿದಿದ್ದಾರೆ. ಶಿವಣ್ಣರನ್ನು ತಬ್ಬಿಕೊಂಡು ಅವರು ಸಾಂತ್ವನ ಹೇಳಿದ್ದಾರೆ. ಪುನೀತ್ ಪತ್ನಿ ಅಶ್ವಿನಿ ಅವರಿಗೂ ಬಾಲಕೃಷ್ಣ ಸಾಂತ್ವನ ಹೇಳಿದ್ದಾರೆ. ನನ್ನ ಸೋದರ, ಸ್ನೇಹಿತ ಇಲ್ಲವೆಂದು ನೋವಾಗುತ್ತಿದೆ ಎಂದು ತೆಲುಗು ನಟ ನಂದಮೂರಿ ಬಾಲಕೃಷ್ಣ ಶೋಕ ವ್ಯಕ್ತಪಡಿಸಿದ್ದಾರೆ. ನಾವು ಒಂದೇ ತಾಯಿ ಮಕ್ಕಳಲ್ಲದಿದ್ದರೂ ಸೋದರರಂತಿದ್ದೆವು. ದೇವರು ಏಕೆ ಇಂತಹ ಅನ್ಯಾಯ ಮಾಡಿದ್ರು ಎಂದು ಬೇಸರವಾಗುತ್ತದೆ. ಪುನೀತ್ ಕಲಾವಿದನಾಗಿ ಅಭಿಮಾನಿಗಳನ್ನು ರಂಜಿಸಿದ್ದರು. ನಟನೆ ಜತೆಗೆ ಸಮಾಜ ಸೇವೆಯೂ ಮಾಡಿದ್ದಾರೆ. ಅವರು ನೇತ್ರ ದಾನ ಕೂಡ ಮಾಡಿದ್ದಾರೆ. ನಾನು ಯಾವುದೇ ಕಾರ್ಯಕ್ರಮಕ್ಕೆ ಕರೆದರೂ ಬರುತ್ತಿದ್ದರು. ಲೇಪಾಕ್ಷಿಗೆ ಹಲವು ಬಾರಿ ಶಿವಣ್ಣ, ಪುನೀತ್ ಬಂದಿದ್ದರು. ನಟ ಪುನೀತ್ ಇಲ್ಲ ಅನ್ನೋದೇ ಅಚ್ಚರಿಯಾಗುತ್ತಿದೆ. ನಟ ಪುನೀತ್ ನಮ್ಮ ಮುಂದೆ ಇರದೇ ಇರಬಹುದು. ಆದರೆ ನಮ್ಮ ಮನಸ್ಸಿನಲ್ಲಿ ಶಾಶ್ವತವಾಗಿ ಇರುತ್ತಾರೆ. ನಟ ಪುನೀತ್ ಇಲ್ಲದಿರುವುದು ನನಗೆ ವೈಯಕ್ತಿಕವಾಗಿ ನಷ್ಟ ಎಂದು ಬಾಲಕೃಷ್ಣ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ:

‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

Puneeth Rajkumar: ‘ಜೇಮ್ಸ್​’ ಸಿನಿಮಾ ಖಂಡಿತ ರಿಲೀಸ್​ ಆಗತ್ತೆ; ಬಿಗ್​ ಅಪ್​ಡೇಟ್​​ ​ನೀಡಿದ ನಿರ್ದೇಶಕ ಚೇತನ್​ ಕುಮಾರ್

Follow us on