PM Narendra Modi’s visit: ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಂದಿ ಗಿರಿಧಾಮಕ್ಕೆ 2 ದಿನ ಸಾರ್ವಜನಿಕರ ಪ್ರವೇಶ ನಿಷೇಧ

ಅರುಣ್​ ಕುಮಾರ್​ ಬೆಳ್ಳಿ

Updated on: Mar 24, 2023 | 10:24 AM

ನಿರ್ಬಂಧವು ಇಂದು ಬೆಳಗ್ಗೆ 10 ಗಂಟೆಯಿಂದ ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಇರುತ್ತದೆ. ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಭದ್ರತಾ ದಳದವರ ಓಡಾಟ ಸರಾಗವಾಗಿರಲಿ ಎಂಬ ಉದ್ದೇಶದಿಂದ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.

ಚಿಕ್ಕಬಳ್ಳಾಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ನಾಳೆ ಮತ್ತೊಮ್ಮೊ ರಾಜ್ಯಕ್ಕೆ ಆಗಮಿಸಲಿದ್ದು ಜಿಲ್ಲೆಯ ಮುದ್ದೇನಹಳ್ಳಿ (Muddenahalli) ಬಳಿ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವಾಸಿ ತಾಣವಾಗಿರುವ ನಂದಿ ಗಿರಿಧಾಮಕ್ಕೆ (Nandi Hills) ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ. ನಿರ್ಬಂಧವು ಇಂದು ಬೆಳಗ್ಗೆ 10 ಗಂಟೆಯಿಂದ ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಇರುತ್ತದೆ. ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಭದ್ರತಾ ದಳದವರ ಓಡಾಟ ಸರಾಗವಾಗಿರಲಿ ಎಂಬ ಉದ್ದೇಶದಿಂದ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 24, 2023 10:24 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.