Loading video

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಕಾಣಿಕೆ ಸಂಗ್ರಹ

Updated By: Ganapathi Sharma

Updated on: Apr 28, 2025 | 11:31 AM

ಕರ್ನಾಟಕದ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ದೇಗುಲದ ಹುಂಡಿ ಎಣಿಕೆ ಕಾರ್ಯ ಸೋಮವಾರ ನೆರವೇರಿದ್ದು, ಇದೇ ವೇಳೆ ನಗದು ಹಣದ ಜತೆಗೆ ಚಿನ್ನಾಭರಣ, ಬೆಳ್ಳಿ ಹಾಗೂ ವಿದೇಶಿ ಕರೆನ್ಸಿ ಕೂಡ ದೊರೆತಿದೆ. ಹುಂಡಿ ಎಣಿಕೆ ಕಾರ್ಯದ ವಿಡಿಯೋ ಇಲ್ಲಿದೆ ನೋಡಿ.

ಮೈಸೂರು, ಏಪ್ರಿಲ್ 28: ಮೈಸೂರು, ಏಪ್ರಿಲ್ 28: ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಹುಂಡಿ ಎಣಿಕೆ ನಡೆದಿದ್ದು, ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಕಾಣಿಕೆ ಸಂಗ್ರಹವಾಗಿರುವುದು ತಿಳಿದುಬಂದಿದೆ. ಹುಂಡಿಯಲ್ಲಿ 103 ಗ್ರಾಂ ಚಿನ್ನ, 3 ಕೆಜಿ ಬೆಳ್ಳಿ, 24 ವಿದೇಶಿ ಕರೆನ್ಸಿಗಳು ಸಹ ದೊರೆತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ