AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

Jagadisha B
| Edited By: |

Updated on:Apr 16, 2026 | 2:25 PM

Share

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಡೀಸೆಲ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ಚಾಲಕ ಮತ್ತು ಸ್ಥಳೀಯರ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಬೆಂಕಿ ನಂದಿಸಿ ದೊಡ್ಡ ಅನಾಹುತವನ್ನು ತಪ್ಪಿಸಲಾಗಿದೆ.

ತುಮಕೂರು, ಏಪ್ರಿಲ್​​ 16: ಚಲಿಸುತ್ತಿದ್ದ ಕೆಎಸ್ಆರ್​ಟಿಸಿ ಬಸ್​ನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ. ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳೆಗೆ ಇಳಿಸಲಾಗಿದ್ದು, ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 16, 2026 02:24 PM
Follow Us