ಅಮಾವಾಸ್ಯೆ ಹುಣ್ಣಿಮೆಯಂದು ಪ್ರಕೃತಿಯಲ್ಲಿ ಏರುಪೇರಾಗುತ್ತೆ ಏಕೆ ತಿಳಿಯಿರಿ

Updated on: Jul 21, 2025 | 6:58 AM

ಡಾ. ಬಸವರಾಜ ಗುರೂಜಿಯವರ ನಿತ್ಯ ಭಕ್ತಿ ಕಾರ್ಯಕ್ರಮದ ಈ ಭಾಗದಲ್ಲಿ ಅಮಾವಾಸ್ಯೆ ಮತ್ತು ಹುಣ್ಣಿಮೆಗಳ ಸಮಯದಲ್ಲಿ ಪ್ರಕೃತಿ ಮತ್ತು ಮನಸ್ಸಿನಲ್ಲಿ ಏಕೆ ಏರುಪೇರುಗಳು ಆಗುತ್ತವೆ ಎಂಬುದನ್ನು ವಿವರಿಸಲಾಗಿದೆ. ಚಂದ್ರನ ಪ್ರಭಾವ, ನೀರಿನ ಪ್ರಮಾಣದಲ್ಲಿನ ಬದಲಾವಣೆಗಳು ಮತ್ತು ನವಗ್ರಹಗಳ ಪ್ರಭಾವದ ಬಗ್ಗೆ ತಿಳಿಸಲಾಗಿದೆ.

ಬೆಂಗಳೂರು, ಜುಲೈ 21: ಅಮಾವಾಸ್ಯೆ ಮತ್ತು ಹುಣ್ಣಿಮೆಗಳು ಪ್ರಕೃತಿಯ ಮೇಲೆ ಗಮನಾರ್ಹ ಪ್ರಭಾವ ಬೀರುತ್ತವೆ ಎಂದು ಡಾ. ಬಸವರಾಜ ಗುರುಜಿಯವರು ವಿಡಿಯೋದಲ್ಲಿ ತಿಳಿಸಿದ್ದಾರೆ. ಈ ದಿನಗಳಲ್ಲಿ ಮಾನಸಿಕ ಅಸ್ಥಿರತೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಚಂದ್ರನು ನೀರಿನ ಮೇಲೆ ಹಾಗೂ ಮನಸ್ಸಿನ ಮೇಲೆ ಪ್ರಭಾವ ಬೀರುತ್ತಾನೆ. ಭೂಮಿಯ ಮೇಲಿನ ನೀರಿನ ಪ್ರಮಾಣದಲ್ಲಿನ ಬದಲಾವಣೆಗಳು ಮಾನಸಿಕ ಅಸ್ವಸ್ಥತೆಗೆ ಕಾರಣವಾಗಬಹುದು. ಹುಣ್ಣಿಮೆಯ ಸಮಯದಲ್ಲಿ ದೇವತಾ ಆರಾಧನೆ ಮತ್ತು ಪೂಜೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಅಮಾವಾಸ್ಯೆಯ ದಿನ ದೂರ ಪ್ರಯಾಣ ಅಥವಾ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸುವುದು ಉತ್ತಮ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More