‘ಸಮಾಜದ ಪ್ರತಿಯೊಬ್ಬರನ್ನೂ ಟಿವಿ9 ಗುರುತಿಸುತ್ತದೆ’; ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್
ರಶ್ಮಿಕಾ ಮಂದಣ್ಣ ಮೊದಲಾದವರಿಗೆ ಸನ್ಮಾನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ರವಿಚಂದ್ರನ್ ಮೊದಲಾದವರು ಆಗಮಿಸಿದ್ದರು.
ಟಿವಿ9 ಕನ್ನಡ ವತಿಯಿಂದ ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡುವ ಕಾರ್ಯ ನಡೆಯಿತು. ರಶ್ಮಿಕಾ ಮಂದಣ್ಣ ಮೊದಲಾದವರಿಗೆ ಸನ್ಮಾನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ರವಿಚಂದ್ರನ್ ಮೊದಲಾದವರು ಆಗಮಿಸಿದ್ದರು. ಈ ವೇಳೆ ಅವರು ಟಿವಿ9 ಕನ್ನಡದ ಕಾರ್ಯದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. ‘ಟಿವಿ9 ಅದ್ಭುತವಾಗಿ ಬೆಳೆದಿದೆ. ಮನೆಮನೆಗೂ ತಲುಪಿದೆ. ಸಮಾಜದಲ್ಲಿ ವಿವಿಧ ಸಾಧಕರನ್ನು ಗುರುತಿಸಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜದ ಪ್ರತಿಯೊಬ್ಬರನ್ನೂ ಟಿವಿ9 ಗುರುತಿಸುತ್ತದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಮೆಚ್ಚುಗೆಯ ಮಾತುಗಳನ್ನು ಆಡಿದರು.
ಇದನ್ನೂ ಓದಿ: ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ
‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಿಂಚಿದ ರವಿಚಂದ್ರನ್
Published on: Jan 05, 2022 07:00 AM
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

