‘ಪತ್ರಿಕೋದ್ಯಮಕ್ಕೆ ದೊಡ್ಡ ಶಕ್ತಿ ಇದೆ’; ಟಿವಿ9 ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ರಶ್ಮಿಕಾ ಮಾತು
ನಟಿ ರಶ್ಮಿಕಾ ಮಂದಣ್ಣ ಕೂಡ ಪತ್ರಿಕೋದ್ಯಮವನ್ನು ಓದಿದ್ದಾರೆ. ಆ ಕುರಿತು ತಮ್ಮ ಅಭಿಪ್ರಾಯ ಏನು ಎಂಬುದನ್ನು ಅವರು ತಿಳಿಸಿದರು.
ನಟಿ ರಶ್ಮಿಕಾ ಮಂದಣ್ಣ ಅವರು ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿ ಆಗಿದ್ದರು. ‘ಟಿವಿ9 ಕನ್ನಡ’ ಸುದ್ದಿ ವಾಹಿನಿಯ 15ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳ 9 ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ರಶ್ಮಿಕಾ ಮಂದಣ್ಣ ಕೂಡ ಪ್ರಶಸ್ತಿ ಸ್ವೀಕರಿಸಿದರು. ಅದಕ್ಕೂ ಮುನ್ನ ಮಾತನಾಡಿದ ಅವರು ಕೆಲವು ವಿಚಾರಗಳನ್ನು ಹಂಚಿಕೊಂಡರು. ರಶ್ಮಿಕಾ ಕೂಡ ಪತ್ರಿಕೋದ್ಯಮವನ್ನು ಓದಿದ್ದಾರೆ. ಆ ಕುರಿತು ತಮ್ಮ ಅಭಿಪ್ರಾಯ ಏನು ಎಂಬುದನ್ನು ಅವರು ತಿಳಿಸಿದರು. ಪುನೀತ್ ರಾಜ್ಕುಮಾರ್, ಸಂಜಿತ್ ಹೆಗಡೆ ಸೇರಿದಂತೆ ವಿವಿಧ ಕ್ಷೇತ್ರದ 9 ಜನರಿಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ನೀಡಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ರವಿಚಂದ್ರನ್, ಶಿವರಾಜ್ಕುಮಾರ್, ಸಂಗೀತ ನಿರ್ದೇಶಕ ರಘು ದೀಕ್ಷಿತ್, ಚರಣ್ ರಾಜ್ ಸೇರಿದಂತೆ ಅನೇಕ ಗಣ್ಯರು ಭಾಗಿ ಆಗಿದ್ದರು.
ಇದನ್ನೂ ಓದಿ:
Rashmika Mandanna: ಕೊಡಗಿನ ಕುವರಿ ರಶ್ಮಿಕಾ ಹೊಸ ವರ್ಷವನ್ನು ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಚಿತ್ರಗಳು
ಪುನೀತ್ ರಾಜ್ಕುಮಾರ್ಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ; ವೇದಿಕೆಯಲ್ಲಿ ಭಾವುಕರಾದ ಶಿವಣ್ಣ
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ

