ಕಾಂಗ್ರೆಸ್ನ ನಸೀರ್ ಅಹ್ಮದ್ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಬೆಂಗಳೂರಿನಲ್ಲಿರುವ ಮೆಸರ್ಸ್ ಸ್ಕಾಟ್ಸ್ ಗಾರ್ಮೆಂಟ್ಸ್ ಲಿಮಿಟೆಡ್ನ 1,454 ಕೋಟಿ ರೂಪಾಯಿ ಬಾಕಿ ಸಾಲವನ್ನು ಮರುಪಾವತಿಸಲು ವಿಫಲರಾದ ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯ (ಎಂಎಲ್ಸಿ) ನಸೀರ್ ಅಹ್ಮದ್ ಅವರನ್ನು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT)ಯ ಬೆಂಗಳೂರು ಪೀಠ ‘ದಿವಾಳಿ’ ಎಂದು ಘೋಷಿಸಿದೆ. ಇದರಿಂದಾಗಿ ಇದೀಗ ಅವರ MLC ಸ್ಥಾನಕ್ಕೆ ಕುತ್ತು ಬಂದಿದೆ. IBC-2016ರ ಅಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ ಜೂನ್ 8ರಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ NCLT, ಇಂದು (ಜೂನ್ 12) ಈ ಆದೇಶವನ್ನು ನೀಡಿದೆ. ಹೀಗಾಗಿ ಎಂಎಲ್ಸಿ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆಗಳಿವೆ.
ಬೆಂಗಳೂರು, (ಜೂನ್ 12): ಬೆಂಗಳೂರಿನಲ್ಲಿರುವ ಮೆಸರ್ಸ್ ಸ್ಕಾಟ್ಸ್ ಗಾರ್ಮೆಂಟ್ಸ್ ಲಿಮಿಟೆಡ್ನ 1,454 ಕೋಟಿ ರೂಪಾಯಿ ಬಾಕಿ ಸಾಲವನ್ನು ಮರುಪಾವತಿಸಲು ವಿಫಲರಾದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ (Congress MLC Naseer Ahmed )ಅವರನ್ನು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT)ಯ ಬೆಂಗಳೂರು ಪೀಠ ‘ದಿವಾಳಿ’ ಎಂದು ಘೋಷಿಸಿದೆ. ಇದರಿಂದಾಗಿ ಇದೀಗ ಅವರ MLC ಸ್ಥಾನಕ್ಕೆ ಕುತ್ತು ಬಂದಿದೆ. IBC-2016ರ ಅಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ ಜೂನ್ 8ರಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ NCLT, ಇಂದು (ಜೂನ್ 12) ಈ ಆದೇಶವನ್ನು ನೀಡಿದೆ. ಹೀಗಾಗಿ ಎಂಎಲ್ಸಿ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆಗಳಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Follow Us
