ಕೊವಿಡ್ ಎನ್.1 ತಳಿ ಜಾಸ್ತಿ ಅಪಾಯಕಾರಿ ಅಲ್ಲ, ಆದರೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಸಡ್ಡೆ ಬೇಡ: ಡಾ ಶರಣಪ್ರಕಾಶ್ ಪಾಟೀಲ್, ಸಚಿವ

ಬೆಂಗಳೂರಲ್ಲಿರುವ ವಿಕ್ಟೋರಿಯ ಆಸ್ಪತ್ರೆಯಲ್ಲಿ ಕೋವಿಡ್ ಜೆಎನ್.1 ಸೋಂಕಿನ ಚಿಕಿತ್ಸೆಗೆ ಮಾಡಿಕೊಂಡಿರುವ ಸಿದ್ದತೆಗಳನ್ನು ಡಾ ಶರಣಪ್ರಕಾಶ್ ಪಾಟೀಲ್ ವೀಕ್ಷಿಸಿದರು. ಹೊಸ ವರ್ಷಾಚರಣೆ ಹೇಗೆ ಅನ್ನೋದು ನಗರವಾಸಿಗಳನ್ನು ಒಂದೇ ಸಮನೆ ಕಾಡುತ್ತಿರುವ ವಿಷಯವಾಗಿರುವ ಹಿನ್ನೆಲೆಯಲ್ಲಿ ಇದುವರೆಗೆ ಯಾವುದೇ ಮಾರ್ಗಸೂಚಿಯನ್ನು ಸರ್ಕಾರ ಸಿದ್ಧಪಡಿಸಿಲ್ಲ ಎಂದು ಸಚಿವ ಹೇಳಿದರು.

ಕೊವಿಡ್ ಎನ್.1 ತಳಿ ಜಾಸ್ತಿ ಅಪಾಯಕಾರಿ ಅಲ್ಲ, ಆದರೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಸಡ್ಡೆ ಬೇಡ: ಡಾ ಶರಣಪ್ರಕಾಶ್ ಪಾಟೀಲ್, ಸಚಿವ
|

Updated on: Dec 23, 2023 | 7:17 PM

ಬೆಂಗಳೂರು: ಕೋವಿಡ್ ಜೆಎನ್.1 (Covid JN.1) ರೂಪಾಂತರಿ ತಳಿಯ ಬಗ್ಗೆ ಜನರು ಆತಂಕಪಡುವ ಅವಶ್ಯಕತೆಯಿಲ್ಲ ಆದರೆ ಹಾಗಂತ ಮುನ್ನೆಚ್ಚರಿಕೆ ಕ್ರಮಗಳನ್ನು ಯಾವ ಕಾರಣಕ್ಕೂ ಕಡೆಗಣಿಸಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್ (Dr Sharan Prakash Patil) ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ, ವಿಶ್ವ ಆರೋಗ್ಯ ಸಂಸ್ಥೆಯೇ (WHO) ಹೊಸ ತಳಿ ಅಪಾಯಕಾರಿ ಅಲ್ಲವೆಂದು ಹೇಳಿರುವುದರಿಂದ ಆತಂಕ ಪಡಬೇಕಿಲ್ಲ. ಆದರೆ 60ಕ್ಕಿಂತ ಹೆಚ್ಚಿನ ಪ್ರಾಯದವರು ಅದರಲ್ಲೂ ವಿಶೇಷವಾಗಿ ಮಧುಮೇಹ, ಅಧಿಕ ರಕದೊತ್ತಡ ಮತ್ತು ಬೇರೆ ಕಾಯಿಲೆಗಳಿಂದ ಬಳಲುತ್ತಿರುವವರು ಮಾಸ್ಕ್ ಧರಿಸಲೇಬೇಕು ಎಂದು ಡಾ ಪಾಟೀಲ್ ಹೇಳಿದರು. ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಆಸ್ಪತ್ರೆಗಳಲ್ಲಿ, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ ಸ್ಥಾಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದೆ. ವಾರ್ಡ್ ಗಳಲ್ಲಿ ಸಾಕಷ್ಟಿ ಬೆಡ್, ಆಕ್ಸಿಜನ್ ಸಿಲಿಂಡರ್ ಮತ್ತು ಅಗತ್ಯವಿರುವ ಎಲ್ಲ ಉಪಕರಣಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಡಾ ಶರಣಪ್ರಕಾಶ್ ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ