ಕೊವಿಡ್ ಎನ್.1 ತಳಿ ಜಾಸ್ತಿ ಅಪಾಯಕಾರಿ ಅಲ್ಲ, ಆದರೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಸಡ್ಡೆ ಬೇಡ: ಡಾ ಶರಣಪ್ರಕಾಶ್ ಪಾಟೀಲ್, ಸಚಿವ

Updated on: Dec 23, 2023 | 7:17 PM

ಬೆಂಗಳೂರಲ್ಲಿರುವ ವಿಕ್ಟೋರಿಯ ಆಸ್ಪತ್ರೆಯಲ್ಲಿ ಕೋವಿಡ್ ಜೆಎನ್.1 ಸೋಂಕಿನ ಚಿಕಿತ್ಸೆಗೆ ಮಾಡಿಕೊಂಡಿರುವ ಸಿದ್ದತೆಗಳನ್ನು ಡಾ ಶರಣಪ್ರಕಾಶ್ ಪಾಟೀಲ್ ವೀಕ್ಷಿಸಿದರು. ಹೊಸ ವರ್ಷಾಚರಣೆ ಹೇಗೆ ಅನ್ನೋದು ನಗರವಾಸಿಗಳನ್ನು ಒಂದೇ ಸಮನೆ ಕಾಡುತ್ತಿರುವ ವಿಷಯವಾಗಿರುವ ಹಿನ್ನೆಲೆಯಲ್ಲಿ ಇದುವರೆಗೆ ಯಾವುದೇ ಮಾರ್ಗಸೂಚಿಯನ್ನು ಸರ್ಕಾರ ಸಿದ್ಧಪಡಿಸಿಲ್ಲ ಎಂದು ಸಚಿವ ಹೇಳಿದರು.

ಬೆಂಗಳೂರು: ಕೋವಿಡ್ ಜೆಎನ್.1 (Covid JN.1) ರೂಪಾಂತರಿ ತಳಿಯ ಬಗ್ಗೆ ಜನರು ಆತಂಕಪಡುವ ಅವಶ್ಯಕತೆಯಿಲ್ಲ ಆದರೆ ಹಾಗಂತ ಮುನ್ನೆಚ್ಚರಿಕೆ ಕ್ರಮಗಳನ್ನು ಯಾವ ಕಾರಣಕ್ಕೂ ಕಡೆಗಣಿಸಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್ (Dr Sharan Prakash Patil) ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ, ವಿಶ್ವ ಆರೋಗ್ಯ ಸಂಸ್ಥೆಯೇ (WHO) ಹೊಸ ತಳಿ ಅಪಾಯಕಾರಿ ಅಲ್ಲವೆಂದು ಹೇಳಿರುವುದರಿಂದ ಆತಂಕ ಪಡಬೇಕಿಲ್ಲ. ಆದರೆ 60ಕ್ಕಿಂತ ಹೆಚ್ಚಿನ ಪ್ರಾಯದವರು ಅದರಲ್ಲೂ ವಿಶೇಷವಾಗಿ ಮಧುಮೇಹ, ಅಧಿಕ ರಕದೊತ್ತಡ ಮತ್ತು ಬೇರೆ ಕಾಯಿಲೆಗಳಿಂದ ಬಳಲುತ್ತಿರುವವರು ಮಾಸ್ಕ್ ಧರಿಸಲೇಬೇಕು ಎಂದು ಡಾ ಪಾಟೀಲ್ ಹೇಳಿದರು. ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಆಸ್ಪತ್ರೆಗಳಲ್ಲಿ, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ ಸ್ಥಾಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದೆ. ವಾರ್ಡ್ ಗಳಲ್ಲಿ ಸಾಕಷ್ಟಿ ಬೆಡ್, ಆಕ್ಸಿಜನ್ ಸಿಲಿಂಡರ್ ಮತ್ತು ಅಗತ್ಯವಿರುವ ಎಲ್ಲ ಉಪಕರಣಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಡಾ ಶರಣಪ್ರಕಾಶ್ ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More