ನೀಟ್ ಪರೀಕ್ಷೆ: ಜನಿವಾರ ತೆಗೆದು ಪರೀಕ್ಷೆ ಬರಿ, ಇಲ್ಲ ಬರಿಬೇಡ ಅಂದ್ರು, ವಿದ್ಯಾರ್ಥಿ
ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ NEET ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಅವರ ಜನಿವಾರ ತೆಗೆಸಲಾಗಿದೆ. ಪರೀಕ್ಷಾ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಶ್ರೀಪಾದ್ ಪಾಟೀಲ್ ಅವರು ಜನಿವಾರ ತೆಗೆಯದಿದ್ದರೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಕಲಬುರಗಿ, ಮೇ 04: ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ಈ ಸಂಬಂಧ ಶ್ರೀಪಾದ್ ಪಾಟೀಲ್ ಮಾತನಾಡಿ, ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗು. ಇಲ್ಲದಿದ್ದರೆ ಪರೀಕ್ಷೆ ಬರೆಯಬೇಡ ಅಂದ್ರು. ಹೀಗಾಗಿ, ಜನಿವಾರ ತೆಗೆದೆ ಎಂದು ಹೇಳಿದರು.
Published on: May 04, 2025 07:22 PM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
