ನೀಟ್​ ಪರೀಕ್ಷೆ: ಜನಿವಾರ ತೆಗೆದು ಪರೀಕ್ಷೆ ಬರಿ, ಇಲ್ಲ ಬರಿಬೇಡ ಅಂದ್ರು, ವಿದ್ಯಾರ್ಥಿ

Edited By: ವಿವೇಕ ಬಿರಾದಾರ

Updated on: May 04, 2025 | 7:23 PM

ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ NEET ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಅವರ ಜನಿವಾರ ತೆಗೆಸಲಾಗಿದೆ. ಪರೀಕ್ಷಾ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಶ್ರೀಪಾದ್ ಪಾಟೀಲ್ ಅವರು ಜನಿವಾರ ತೆಗೆಯದಿದ್ದರೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಕಲಬುರಗಿ, ಮೇ 04: ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್‌ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ಈ ಸಂಬಂಧ ಶ್ರೀಪಾದ್ ಪಾಟೀಲ್‌ ಮಾತನಾಡಿ, ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗು. ಇಲ್ಲದಿದ್ದರೆ ಪರೀಕ್ಷೆ ಬರೆಯಬೇಡ ಅಂದ್ರು. ಹೀಗಾಗಿ, ಜನಿವಾರ ತೆಗೆದೆ ಎಂದು ಹೇಳಿದರು.

Published on: May 04, 2025 07:22 PM
Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More