AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಿವಾರ ವಿವಾದ: ಸರ್ಕಾರವನ್ನು ಹೊಣೆ ಮಾಡಲು ಆಗಲ್ಲ, ಇದು ಕೆಟ್ಟ ಹೆಸರು ತರುವ ಪ್ರಯತ್ನ, ಸತೀಶ್ ಜಾರಕಿಹೊಳಿಜನಿವಾರ ವಿವಾದ: ಸರ್ಕಾರವನ್ನು ಹೊಣೆ ಮಾಡಲು ಆಗಲ್ಲ, ಇದು ಕೆಟ್ಟ ಹೆಸರು ತರುವ ಪ್ರಯತ್ನ, ಸತೀಶ್ ಜಾರಕಿಹೊಳಿ

ಜನಿವಾರ ವಿವಾದ: ಸರ್ಕಾರವನ್ನು ಹೊಣೆ ಮಾಡಲು ಆಗಲ್ಲ, ಇದು ಕೆಟ್ಟ ಹೆಸರು ತರುವ ಪ್ರಯತ್ನ, ಸತೀಶ್ ಜಾರಕಿಹೊಳಿ

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 04, 2025 | 10:02 PM

Share

ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯ ಜನಿವಾರ ತೆಗೆದ ಘಟನೆ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿದ್ದಾರೆ. ಇದು ಖಾಸಗಿ ಸಂಸ್ಥೆಯ ಕೃತ್ಯ ಎಂದು ಹೇಳಿ ಸರ್ಕಾರದ ಹೊಣೆಗಾರಿಕೆಯನ್ನು ಅವರು ತಳ್ಳಿಹಾಕಿದ್ದಾರೆ. ಈ ಹೇಳಿಕೆ ವ್ಯಾಪಕ ಟೀಕೆಗೆ ಒಳಗಾಗಿದೆ. ರಾಜಕೀಯ ಲಾಭಕ್ಕಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಎಂದು ಸಚಿವರು ಹೇಳಿದ್ದಾರೆ. ಈ ಘಟನೆಯು ಗಂಭೀರವಾದ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗಿಸಲಾಗಿದೆ. ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಸಚಿವ ಸತೀಶ್​ ಜಾರಕಿಹೊಳಿ ಯಾವುದಾದರೂ ಒಂದು ಇನ್ಸಿಡೆಂಟ್ ಆಗಿರಬಹುದು. ಖಾಸಗಿ ಸಂಸ್ಥೆಗಳಲ್ಲಿ ಆಗಿರುತ್ತೆ. ಸರ್ಕಾರವನ್ನು ಇದಕ್ಕೆ ಹೊಣೆ ಮಾಡಲು ಆಗಲ್ಲ. ರಾಜಕೀಯದಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ.

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.