AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಮ್ಸ್ ಆಸ್ಪತ್ರೆಯ ಎಡವಟ್ಟುಗಳ ಸರಮಾಲೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ..

[lazy-load-videos-and-sticky-control id=”2RhYCDaDwZE”] ಬೆಳಗಾವಿ: ಅದ್ಯಾಕೋ ಏನೋ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಆಡಳಿತ ವರ್ಗದ ಎಡವಟ್ಟುಗಳ ಸರಮಾಲೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಇದೆ ಬಿಮ್ಸ್ ಆಸ್ಪತ್ರೆಯಲ್ಲಿ 4 ದಿನಗಳ ಹಿಂದೆ ವೃದ್ಧೆಯೊಬ್ಬರು ಸರಿಯಾದ ಚಿಕಿತ್ಸೆ ಸಿಗದ ಕಾರಣ ಮೃತ ಪಟ್ಟಿದರು. ಜೊತೆಗೆ 2 ದಿನಗಳ ಹಿಂದೆ ಯುವತಿಯೊಬ್ಬರು ಸರಿಯಾದ ಚಿಕಿತ್ಸೆಯ ಕೊರತೆಯಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ನೆನ್ನೆ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗದೆ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿಯೊಬ್ಬರು ತಮ್ಮ ಮಗುವನ್ನು ಹೊಟ್ಟೆಯಲ್ಲಿ ಕಳೆದುಕೊಳ್ಳಬೇಕಾಯಿತು. ಇವ್ಯಾವುದೂ ಸಾಲದೆಂಬಂತೆ ಮೊನ್ನೆ ಅಧಿಕಾರಿಗಳ ನಿರ್ಲಕ್ಷದಿಂದ […]

ಬಿಮ್ಸ್ ಆಸ್ಪತ್ರೆಯ ಎಡವಟ್ಟುಗಳ ಸರಮಾಲೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ..
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 7:09 PM

Share

[lazy-load-videos-and-sticky-control id=”2RhYCDaDwZE”]

ಬೆಳಗಾವಿ: ಅದ್ಯಾಕೋ ಏನೋ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಆಡಳಿತ ವರ್ಗದ ಎಡವಟ್ಟುಗಳ ಸರಮಾಲೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಇದೆ ಬಿಮ್ಸ್ ಆಸ್ಪತ್ರೆಯಲ್ಲಿ 4 ದಿನಗಳ ಹಿಂದೆ ವೃದ್ಧೆಯೊಬ್ಬರು ಸರಿಯಾದ ಚಿಕಿತ್ಸೆ ಸಿಗದ ಕಾರಣ ಮೃತ ಪಟ್ಟಿದರು. ಜೊತೆಗೆ 2 ದಿನಗಳ ಹಿಂದೆ ಯುವತಿಯೊಬ್ಬರು ಸರಿಯಾದ ಚಿಕಿತ್ಸೆಯ ಕೊರತೆಯಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ನೆನ್ನೆ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗದೆ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿಯೊಬ್ಬರು ತಮ್ಮ ಮಗುವನ್ನು ಹೊಟ್ಟೆಯಲ್ಲಿ ಕಳೆದುಕೊಳ್ಳಬೇಕಾಯಿತು. ಇವ್ಯಾವುದೂ ಸಾಲದೆಂಬಂತೆ ಮೊನ್ನೆ ಅಧಿಕಾರಿಗಳ ನಿರ್ಲಕ್ಷದಿಂದ ಶವಗಳು ಅದಲು ಬದಲಾಗಿ ಶವಗಳ ಸಂಬಂಧಿಕರು ಪೇಚಾಡುವಂತ್ತಾಯಿತು.

ಇಷ್ಟೆಲ್ಲಾ ತಪ್ಪುಗಳಿಂದ ಬುದ್ಧಿ ಕಲಿಯದ ಆಡಳಿತ ಮಂಡಳಿ ಕೊರೊನಾ ಸೋಂಕಿತರ ಮೇಲೆ ಸರಿಯಾಗಿ ನಿಗಾವಹಿಸದೆ ಅವರನ್ನು ಆಸ್ಪತ್ರೆಯ ಆವರಣದಲ್ಲಿ ಬಿಂದಾಸ್ ಆಗಿ ಒಡಾಡಲು ಬಿಟ್ಟಿದ್ದಾರೆ. ಹಾಗೂ ಸೋಂಕಿತರು ತಮ್ಮ ಸಂಬಂಧಿಕರ ಜೊತೆ ಗುಂಪುಗುಂಪಾಗಿ ನಿಂತು ಮಾತನಾಡುತ್ತಿದ್ದರು ಸಹ ಆಸ್ಪತ್ರೆಯ ಸಿಬ್ಬಂದಿಗಳು ಕಂಡು ಕಾಣದಂತಿದ್ದಾರೆ.

ಜೊತೆಗೆ ಸೋಂಕಿತರು ಇರುವ ಕಟ್ಟಡದ ಪಕ್ಕದಲ್ಲಿಯೇ ಇನ್ನೊಂದು ಕಟ್ಟಡದ ಕಾಮಗಾರಿ ನಡೆಯುತ್ತಿದ್ದು ಕಟ್ಟಡ ಕಾರ್ಮಿಕರ ಅಕ್ಕಪಕ್ಕದಲ್ಲಿಯೇ ಸೋಂಕಿತರು ರಾಜಾರೋಷವಾಗಿ ಓಡಾಡುತ್ತಿದ್ದಾರೆ.

ಇದ್ಯಾವುದು ಸಾಲದೆಂಬಂತೆ ಸಾಮಾಜಿಕ ಅಂತರ ಮರೆತ ಸಿಬ್ಬಂದಿಗಳು ಕೊರೊನಾ ಸೋಂಕಿತರನ್ನು ಒಂದೇ ಆಂಬುಲೆನ್ಸ್ ನಲ್ಲಿ ನಾಲ್ಕೈದು ಜನರನ್ನು ತುಂಬಿ ಒಂದು ಕಟ್ಟಡದಿಂದ ಇನ್ನೊಂದು ಕಟ್ಟಡಕ್ಕೆ ಸ್ಥಳಾಂತರ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಸೋಂಕಿತರ ಸಂಬಂಧಿಕರು ಮಾಡುತ್ತಿದ್ದಾರೆ.

Published On - 5:00 pm, Wed, 22 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!