ನಾರಾಯಣಗೌಡ ಮತ್ತು ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ನನ್ನೊಂದಿಗೆ ಚರ್ಚಿಸಿಲ್ಲ: ಡಿಕೆ ಶಿವಕುಮಾರ್
ಪಕ್ಷ ತೊರೆದು ಹೋದವರು ವಾಪಸ್ಸು ಬರಲಿಚ್ಛಿಸಿದರೆ ವರಿಷ್ಟರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದರು.
ಬೆಂಗಳೂರು: ಸಚಿವ ಕೆಸಿ ನಾರಾಯಣಗೌಡ (KC Narayana Gowda) ಅವರ ಸೇರ್ಪಡೆಗೆ ಮಂಡ್ಯ ಮತ್ತು ಕೆಆರ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹೇಳುವ ಪ್ರಕಾರ ನಾರಾಯಣಗೌಡ ಕಾಂಗ್ರೆಸ್ ಸೇರುವ ಬಗ್ಗೆ ತನ್ನೊಂದಿಗೆ ಯಾವತ್ತೂ ಚರ್ಚಿಸಿಲ್ಲ, ಕಾರ್ಯಕರ್ತರಿಗೆ ಏನು ಮಾಹಿತಿ ಸಿಕ್ಕಿದೆಯೋ ತನಗೆ ಗೊತ್ತಿಲ್ಲ ಎಂದು ಶಿವಕುಮಾರ್ ಹೇಳಿದರು. ಮತ್ತೊಬ್ಬ ಸಚಿವ ವಿ ಸೋಮಣ್ಣ (V Somanna) ಅವರು ಸಹ ಪಕ್ಷ ಸೇರುವ ಬಗ್ಗೆ ತಮ್ಮೊಂದಿಗೆ ಮಾತಾಡಿಲ್ಲ ಎಂದ ಅವರು ಕನಕಪುರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದಕ್ಕೆ ಆಹ್ವಾನಿಸಿ ಪತ್ರವೊಂದನ್ನು ಬರೆದಿದ್ದಾರೆ ಎಂದು ಹೇಳಿದರು. ಪಕ್ಷ ತೊರೆದು ಹೋದವರು ವಾಪಸ್ಸು ಬರಲಿಚ್ಛಿಸಿದರೆ ವರಿಷ್ಟರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್: ದರೋಡೆಗಿಳಿದಿದ್ದ ಗ್ಯಾಂಗ್ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್

