ಬೆಳಗಾವಿ: ನಗರದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪೀತ ಪತ್ರಿಕೋದ್ಯಮ ನಡೆಸುವ ಮಾಧ್ಯಮಗಳ ವರದಿಗಳನ್ನು ಆಧರಿಸಿ ಪ್ರಶ್ನೆಗಳನ್ನು ಕೇಳಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು. ಬೆಳಗಾವಿಯಲ್ಲಿ ಈ ಬಾರಿ ವಿಧಾನಸಭಾ ಅಧಿವೇಶನ (Assembly session) ನಡೆಸಲಾಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಶಿವಕುಮಾರ್, ಒಂದೆರಡು ದಿನಗಳಲ್ಲಿ ಸಚಿವ ಸಂಪುಟ ಸಬೆ ನಡೆಯಲಿದೆ, ಸಭೆಯಲ್ಲಿ ಒಂದು ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಶಿವಕುಮಾರ್ ಎರಡನೇ ಬಾರಿಗೆ ಜೈಲಿಗೆ ಹೋಗೋದಿಕ್ಕೆ ತಯಾರಿ ಮಾಡಿಕೊಳ್ಳಬೇಕು, ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣದಲ್ಲಿ ಶಿವಕುಮಾರ ಪಾತ್ರವಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದ್ದಾರೆ ಅಂತ ಪತ್ರಕರ್ತರೊಬ್ಬರು ಹೇಳಿದಾಗ ಕಟೀಲ್ ಜಜ್ಜಾ? ಎಂದು ಮರು ಪ್ರಶ್ನೆ ಹಾಕಿದರು. ನಳಿನ್ ಕುಮಾರ್ ಕಟೀಲ್ ಮತ್ತು ಹೆಚ್ ಡಿ ಕುಮಾರಸ್ವಾಮಿ ಇಬ್ಬರೂ ಜಜ್ ಗಳಲ್ಲ ಎಂದು ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ