BSY in Yadgir: ಸೋಮಣ್ಣ ಅಥವಾ ಬೇರೆ ಯಾವುದೇ ಸಚಿವ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿಲ್ಲವೆಂದ ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Mar 08, 2023 | 12:09 PM

ಸಚಿವ ವಿ ಸೋಮಣ್ಣ ಕಾಂಗ್ರೆಸ್ ಪಕ್ಷ ಸೇರುವ ವದಂತಿ ಬಗ್ಗೆ ಬಿಎಸ್​ವೈ ಗಮನ ಸೆಳೆದಾಗ, ಬಿಜೆಪಿಯ ಯಾವುದೇ ಮಂತ್ರಿ, ಶಾಸಕ ಕಾಂಗ್ರೆಸ್ ಸೇರುತ್ತಿಲ್ಲ, ತಾವು ಬೆಂಗಳೂರಿಗೆ ವಾಪಸ್ಸಾದ ನಂತರ ಸೋಮಣ್ಣ ಜೊತೆ ಮಾತಾಡುವುದಾಗಿ ಅವರು ಹೇಳಿದರು.

ಯಾದಗಿರಿ: ವಿಜಯ ಸಂಕಲ್ಪ ಯಾತ್ರೆ (Vijay Sankalp Yatre) ಭಾಗವಾಗಿ ಯಾದಗಿರಿ ಜಿಲ್ಲೆ ಪ್ರವಾಸದಲ್ಲಿರುವ ಬಿಎಸ್ ಯಡಿಯೂರಪ್ಪನವರು (BS Yediyurappa,) ಇಂದು ನಗರದಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಮಾತಿಗೆ ಹೆಚ್ಚು ಮಹತ್ವ ನೀಡುವ ಅವಶ್ಯಕತೆಯಿಲ್ಲ ಎಂದು ಹೇಳಿದರು. ಸಚಿವ ವಿ ಸೋಮಣ್ಣ (V Somanna) ಅವರು ಕಾಂಗ್ರೆಸ್ ಪಕ್ಷ ಸೇರುವ ವದಂತಿ ಬಗ್ಗೆ ಅವರ ಗಮನ ಸೆಳೆದಾಗ, ಬಿಜೆಪಿಯ ಯಾವುದೇ ಮಂತ್ರಿ, ಶಾಸಕ ಕಾಂಗ್ರೆಸ್ ಸೇರುತ್ತಿಲ್ಲ, ತಾವು ಬೆಂಗಳೂರಿಗೆ ವಾಪಸ್ಸಾದ ನಂತರ ಸೋಮಣ್ಣ ಜೊತೆ ಮಾತಾಡುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 08, 2023 12:09 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.