ನಾವು ಯಾವ ರಾಜ್ಯಕ್ಕೂ ಹಣ ನೀಡಲ್ಲ, ಅವರು ನಮ್ಮನ್ನು ಕೇಳೋದೂ ಇಲ್ಲ: ಸಿದ್ದರಾಮಯ್ಯ, ಮುಖ್ಯಮಂತ್ರಿ
ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಲ್ ರಿಲೀಸ್ ಮಾಡಲು 40 ಪರ್ಸೆಂಟ್ ಕಮೀಶನ್ ಕೇಳಲಾಗುತ್ತದೆ ಎಂದು ಆರೋಪಿಸಿದ ಅಂಬಿಕಾಪತಿಯ ಫ್ಲ್ಯಾಟ್ ನಲ್ಲಿ ಹಣ ಸಿಕ್ಕಿರುವುದು ಹಲವಾರು ಊಹಾಪೋಹಗಳಿಗೆ ಕಾರಣವಾಗಿದೆ. ವಿಧಾನ ಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹಣ ಕಳಿಸಲು ಕಾಂಗ್ರೆಸ್ ಸರ್ಕಾರ ಕಂಟ್ರ್ಯಾಕ್ಟರ್ ಬಳಿ ಹಣ ಕೂಡಿಟ್ಟಿತ್ತು ಎಂದು ವಿರೋಧಪಕ್ಷಗಳಳು ಆರೋಪಿಸುತ್ತಿವೆ.
ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್ ಅಂಬಿಕಾಪತಿಗೆ (R Ambikapathy) ಸೇರಿದ ಫ್ಲ್ಯಾಟೊಂದರಲ್ಲಿ ಐಟಿ ದಾಳಿಯ (IT raids) ವೇಳೆ ಸಿಕ್ಕಿರುವ ರೂ. 42 ಕೋಟಿ ರಾಜಕೀಯ ಬಣ್ಣ ಪಡೆದುಕೊಂಡಿದೆ. ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಲ್ ರಿಲೀಸ್ ಮಾಡಲು 40 ಪರ್ಸೆಂಟ್ ಕಮೀಶನ್ ಕೇಳಲಾಗುತ್ತದೆ ಎಂದು ಆರೋಪಿಸಿದ ಅಂಬಿಕಾಪತಿಯ ಫ್ಲ್ಯಾಟ್ ನಲ್ಲಿ ಹಣ ಸಿಕ್ಕಿರುವುದು ಹಲವಾರು ಊಹಾಪೋಹಗಳಿಗೆ ಕಾರಣವಾಗಿದೆ. ವಿಧಾನ ಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹಣ ಕಳಿಸಲು ಕಾಂಗ್ರೆಸ್ ಸರ್ಕಾರ ಕಂಟ್ರ್ಯಾಕ್ಟರ್ ಬಳಿ ಹಣ ಕೂಡಿಟ್ಟಿತ್ತು ಎಂದು ವಿರೋಧಪಕ್ಷಗಳಳು ಆರೋಪಿಸುತ್ತಿವೆ. ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಬಿಜೆಪಿ ಮಾಡುತ್ತಿರುವ ಆರೋಪದ ಬಗ್ಗೆ ಕೇಳಿದಾಗ ಸಿಡಿಮಿಡಿಗೊಂಡರು. ಬೇರೆ ರಾಜ್ಯಗಳು ನಮ್ಮಿಂದ ಹಣ ಕೇಳಲ್ಲ ಮತ್ತು ನಾವು ಯಾವ ರಾಜ್ಯಕ್ಕೂ ಹಣ ಕೊಡಲ್ಲ ಎಂದು ಅವರು ಹೇಳಿದರು. ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪಗಳೆಲ್ಲ ಸುಳ್ಳು ಮತ್ತು ಆಧಾರರಹಿತ ಎಂದು ಸಿದ್ದರಾಮಯ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
