AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿತೃಪಕ್ಷದಂದು ಖದೀಮನ ಕೈಚಳಕ: ಗುಂಡೇಟು ತಿಂದು ಜೈಲಿಗೆ ಹೋಗಿದ್ದ ಕಳ್ಳ ಮತ್ತೆ ಸಿಕ್ಕಿ ಬಿದ್ದ

[lazy-load-videos-and-sticky-control id=”vJ4V65pUZ7E”] ನೆಲಮಂಗಲ: ಹುಟ್ಟು ಗುಣ ಸುಟ್ಟರೂ ಹೋಗೋಲ್ಲ ಅನ್ನು ಗಾದೆ ಮಾತಿನಂತೆ ಇಲ್ಲೊಬ್ಬ ಕಳ್ಳ ಪೊಲೀಸರ ಗುಂಡೇಟು ತಿಂದು ಕಾಲು ಪಂಚರ್ ಮಾಡಿಕೊಂಡು ಜೈಲುಪಾಲಾಗಿದ್ದರೂ ಚಾಳಿ ಬಿಡದೆ ಮತ್ತೆ ಕಳ್ಳತನ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ನ್ಯಾಯ ಹೇಳಿ ಶಿಕ್ಷೆ ಕೊಡಿಸೋ ವಕೀಲರ ಮನೆಯಲ್ಲೇ ಈ ಖದೀಮ ತನ್ನ ಕೈಚಳಕ ತೋರಿಸಿ ಕಂಬಿ ಹಿಂದೆ ಬಿದ್ದಿದ್ದಾನೆ. ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಬಂಧಿತ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸುಭಾಷ್‌ನಗರದ ನಿವಾಸಿ ವಕೀಲ ಹನುಮಂತರಾಯಪ್ಪಇದೇ ತಿಂಗಳ 11 […]

ಪಿತೃಪಕ್ಷದಂದು ಖದೀಮನ ಕೈಚಳಕ: ಗುಂಡೇಟು ತಿಂದು ಜೈಲಿಗೆ ಹೋಗಿದ್ದ ಕಳ್ಳ ಮತ್ತೆ ಸಿಕ್ಕಿ ಬಿದ್ದ
ಆಯೇಷಾ ಬಾನು
|

Updated on:Sep 29, 2020 | 3:46 PM

Share

[lazy-load-videos-and-sticky-control id=”vJ4V65pUZ7E”]

ನೆಲಮಂಗಲ: ಹುಟ್ಟು ಗುಣ ಸುಟ್ಟರೂ ಹೋಗೋಲ್ಲ ಅನ್ನು ಗಾದೆ ಮಾತಿನಂತೆ ಇಲ್ಲೊಬ್ಬ ಕಳ್ಳ ಪೊಲೀಸರ ಗುಂಡೇಟು ತಿಂದು ಕಾಲು ಪಂಚರ್ ಮಾಡಿಕೊಂಡು ಜೈಲುಪಾಲಾಗಿದ್ದರೂ ಚಾಳಿ ಬಿಡದೆ ಮತ್ತೆ ಕಳ್ಳತನ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.

ನ್ಯಾಯ ಹೇಳಿ ಶಿಕ್ಷೆ ಕೊಡಿಸೋ ವಕೀಲರ ಮನೆಯಲ್ಲೇ ಈ ಖದೀಮ ತನ್ನ ಕೈಚಳಕ ತೋರಿಸಿ ಕಂಬಿ ಹಿಂದೆ ಬಿದ್ದಿದ್ದಾನೆ. ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಬಂಧಿತ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸುಭಾಷ್‌ನಗರದ ನಿವಾಸಿ ವಕೀಲ ಹನುಮಂತರಾಯಪ್ಪಇದೇ ತಿಂಗಳ 11 ನೇ ತಾರೀಖು ಪಿತೃಪಕ್ಷಕ್ಕೆಂದು ತಮ್ಮ ಊರಿಗೆ ತೆರಳಿದ್ದರು. ಈ ವೇಳೆ ಪಕ್ಕದ ಮನೆಯಲ್ಲೇ ಇದ್ದುಕೊಂಡು ಹೊಂಚುಹಾಕಿದ್ದ ಆರೋಪಿ ಜಯಂತ್ ಹಾಗೂ ಉಮೇಶ್ ಐದು ಲಕ್ಷ ಮೌಲ್ಯದ ಚಿನ್ನಾಭರಣವನ್ನ ದರೋಡೆ ಮಾಡಿ ಪರಾರಿಯಾಗಿದ್ದರು.

ಗುಂಡೇಟು ತಿಂದರೂ ಬುದ್ಧಿ ಬರಲಿಲ್ಲ: ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ನಗರ ಪೊಲೀಸರು ಇನ್ಸ್ಪೆಕ್ಟರ್ ಶಿವಣ್ಣ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ, ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ 9ಕ್ಕಿಂತ ಹೆಚ್ಚು ಠಾಣೆಗೆ ಬೇಕಾಗಿದ್ದ ಆರೋಪಿ ಜಯಂತ್‌ನನ್ನು ಮಾರ್ಚ್ 22 2019 ರಂದು ಬಂಧಿಸುವ ವೇಳೆ ಪೊಲೀಸರ ಮೇಲೆ‌ ಹಲ್ಲೆಗೆ ಯತ್ನಿಸಿದ ಕಾರಣ ಪೊಲೀಸರು ಜಯಂತನ ಕಾಲಿಗೆ ಗುಂಡಿಕ್ಕಿ ಆರೋಪಿಯನ್ನ ಸೆರೆ ಹಿಡಿದು ಜೈಲಿಗಟ್ಟಿದ್ದರು. ಆದ್ರೆ ಬೇಲ್ ಮೇಲೆ ಹೊರಬಂದ ಆರೋಪಿ ಜಯಂತ್ ತನ್ನ ಹಳೆ ಚಾಳಿ ಮುಂದುವರೆಸಿ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.

Published On - 1:38 pm, Tue, 29 September 20

ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ