ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದ ಬಿಲಾಲ್ ನಗರದ ತೋಟದ ಶೆಡ್ ಬಳಿ ಆರು ರಾಷ್ಟ್ರಪಕ್ಷಿ ನವಿಲುಗಳ ಕಳೇಬರ ಪತ್ತೆಯಾಗಿದೆ. ಒಂದೇ ಜಾಗದಲ್ಲಿ ಸಾವು ಸಂಭವಿಸಿರುವುದು ವಿಷ ಪ್ರಾಶನದಿಂದಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ನೆಲಮಂಗಲ, ಮಾರ್ಚ್ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಾಷ್ಟ್ರಪಕ್ಷಿ 6 ನವಿಲುಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಲಾಲ್ ನಗರದ ತೋಟದ ಶೆಡ್ ಬಳಿ ಒಂದೇ ಜಾಗದಲ್ಲಿ ಆರು ನವಿಲುಗಳ ಕಳೇಬರ ಪತ್ತೆಯಾಗಿದೆ. ನವಿಲುಗಳಿಗೆ ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us