ನೆಲಮಂಗಲದಿಂದ ಬೆಂಗಳೂರು ಕಡೆ ಬರುವ ಹೆದ್ದಾರಿಯಲ್ಲಿ ಟ್ರಾಫಿಕ್​ ಜಾಮ್

Updated on: May 18, 2025 | 10:01 PM

ವಾರಾಂತ್ಯದ ನಂತರ ಬೆಂಗಳೂರಿಗೆ ಮರಳುತ್ತಿರುವ ಜನರಿಂದ ನೆಲಮಂಗಲದ ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಕುಣಿಗಲ್ ಬೈಪಾಸ್ ಬಳಿ ಪರಿಸ್ಥಿತಿ ಹದಗೆಟ್ಟಿದ್ದು, ಕುಣಿಗಲ್ ಮತ್ತು ತುಮಕೂರಿನಿಂದ ಬರುವ ವಾಹನಗಳು ಒಂದೇ ಸ್ಥಳದಲ್ಲಿ ಸೇರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಇನ್ನೂ ಕನಿಷ್ಠ ಎರಡು ಗಂಟೆಗಳ ಕಾಲ ಈ ಸಮಸ್ಯೆ ಮುಂದುವರಿಯುವ ನಿರೀಕ್ಷೆಯಿದೆ. ವಾಹನ ಸವಾರರು ದೀರ್ಘ ಸಮಯ ರಸ್ತೆಯಲ್ಲಿ ಸಿಲುಕುವಂತಾಗಿದೆ.

ನೆಲಮಂಗಲ, ಮೇ 18: ವೀಕೆಂಡ್‌ ಮುಗಿಸಿಕೊಂಡು ಜನರು ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಇದರಿಂದ ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಆಗಿದೆ. ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ. ಕುಣಿಗಲ್​ನಿಂದ ನೆಲಮಂಗಲ ಹಾಗೂ ತುಮಕೂರಿನಿಂದ ನೆಲಮಂಗಲ ಕಡೆ ಸೇರುವ ಜಂಕ್ಷನ್ ಒಂದೇ ಆಗಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಇನ್ನೂ ಎರಡು ಗಂಟೆಗೆಳ ಕಾಲ ಟ್ರಾಫಿಕ್ ಜಾಮ್ ಇರಲಿದೆ. ಟ್ರಾಫಿಕ್‌ ಜಾಮ್‌ನಿಂದ ವಾಹನ ಸವಾರರು ಗಂಟೆಗಟ್ಟಲೆ ರಸ್ತೆ ಮೇಲೆ ನಿಲ್ಲುವಂತಾಗಿದೆ.

ವರದಿ:ಮಂಜು

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More