ನೆಲಮಂಗಲ ಬಳಿ ಟ್ರಾಫಿಕ್​ ಜಾಮ್: ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಯಲ್ಲಿ ತೆರಳಿದ ಪರಮೇಶ್ವರ್

Updated on: May 11, 2024 | 1:54 PM

ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಕೂಲ್​ ಆಗಿದ್ದಾರೆ. ಮಳೆಯಿಂದ ಕೆಲವೊಂದಿಷ್ಟು ಅವಾಂತರ ಸೃಷ್ಟಿಯಾಗಿದೆ. ಪುಣೆ-ಬೆಂಗಳೂರು ಹೆದ್ದಾರಿಯ ನೆಲಮಂಗಲ ಬಳಿ ರಸ್ತೆ ಕುಸಿತಗೊಂಡು ಟ್ರಾಫಿಕ್​ ಜಾಮ್​ ಉಂಟಾಯಿತು. ಟ್ರಾಫಿಕ್​ ಜಾಮ್​ ಬಿಸಿ ಗೃಹ ಸಚಿವ ಜಿ ಪರಮೇಶ್ವರ ಅವರಿಗೂ ತಟ್ಟಿದೆ.

ನೆಲಮಂಗಲ, ಮೇ 10: ತಡರಾತ್ರಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದೆ (Rain). ತಡರಾತ್ರಿ ಸುರಿದ ಮಳೆಗೆ ಪುಣೆ-ಬೆಂಗಳೂರು ರಸ್ತೆಯ ನೆಲಮಂಗಲದ (Nelamangala) ಬಳಿ ಹೆದ್ದಾರಿ ಕುಸಿದು ಅವಾಂತರ ಸೃಷ್ಟಿಯಾಗಿದ್ದು ಕಿಲೋಮೀಟರ್​ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಟ್ರಾಫಿಕ್​ ಜಾಮ್​ ಬಿಸಿ ಗೃಹ ಸಚಿವ ಪರಮೇಶ್ವರ್ ಅವರಿಗೂ ತಟ್ಟಿದೆ. ಟ್ರಾಫಿಕ್​ ಜಾಮ್​ನಿಂದ ಕೋಪಗೊಂಡ ಪರಮೇಶ್ವರ್​ ಅವರು ಸಂಚಾರಿ ಪೊಲೀಸರ ಮೇಲೆ ಗರಂ ಆದರು. ಬಳಿಕ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಯಲ್ಲಿ ತೆರಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More