ಯಡಿಯೂರಪ್ಪ ₹ 2,500 ಕೋಟಿ ಕೊಟ್ಟು ಮುಖ್ಯಮಂತ್ರಿಯಾಗಿದ್ದು ಅಂತ ನಾನು ಹೇಳಿಲ್ಲ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 14, 2025 | 11:21 AM

ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿವೈ ವಿಜಯೇಂದ್ರ ಪೋರ್ಜರಿ ಮಾಡಿದ ಸಂಗತಿ ಸತ್ಯ, ಅದನ್ನು ಹಿಂದೆಯೂ ಹೇಳಿದ್ದೆ ಮತ್ತು ಈಗಲೂ ಹೇಳುತ್ತೇನೆ, ಹೇಳೋದನ್ನು ಹೇಳಿ ನಂತರ ಹೇಳಿದ್ದಕ್ಕೆ ಕ್ಷಮಾಪಣೆ ಕೇಳುವ ಅಥವಾ ವಿಷಾದ ವ್ಯಕ್ತಪಡಿಸುವ ಜಾಯಮಾನ ತನ್ನದಲ್ಲ ಎಂದು ಬಸನಗೌಡ ಯತ್ನಾಳ್ ಹೇಳಿದರು.

ಬೆಂಗಳೂರು, 14 ಮಾರ್ಚ್:  ಟಿವಿ9 ಪ್ರತಿನಿಧಿಯೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಾನ್ಯಾವತ್ತೂ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮೀಶನ್ (40% commission) ಪಡೆದು ಕೆಲಸ ಮಾಡುತ್ತಿದೆ ಎಂದು ಹೇಳಿಲ್ಲ ಮತ್ತ್ತು ರಾಮದುರ್ಗದಲ್ಲಿ ಯಡಿಯೂರಪ್ಪ (BS Yediyurappa) ಎರಡೂವರೆ ಸಾವಿರ ಕೋಟಿ ರೂ. ಕೊಟ್ಟು ಸಿಎಂ ಆಗಿದ್ದಾರೆಂದು ತಾನು ಹೇಳಲಿಲ್ಲ, ಅದನ್ನು ದಲ್ಲಾಳಿಗಳ ವಿಷಯದಲ್ಲಿ ಹೇಳಿದ್ದು ಎಂದರು. ದೆಹಲಿಯಲ್ಲಿರುವ ವರಿಷ್ಠರು ತನಗೆ ಆಪ್ತರು ಸಿಎಂ ಮಾಡಿಸುತ್ತೇನೆ, ಬಿಜೆಪಿ ರಾಜ್ಯಾಧ್ಯಕ್ಷ ಮಾಡಿಸುತ್ತೇನೆ ಅಂತ ದಲಾಳಿಗಳು ಫೋನ್ ಮಾಡುತ್ತಾರೆ, ಅವರ ಬಗ್ಗೆ ಎಚ್ಚರದಿಂದಿರಬೇಕು, ತನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಜಟಾಪಟಿ ನಡೆದಿದ್ದು ಎಂದು ಯತ್ನಾಳ್ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸ್ಪೀಕರ್‌ ತಮ್ಮ ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.