AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯ ಕೇಳಿ ಯಾರಲ್ಲೂ ಹೋಗಿಲ್ಲ, ಪಕ್ಷದ ವರಿಷ್ಠರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ: ಬಸನಗೌಡ ಯತ್ನಾಳ್

ಸಹಾಯ ಕೇಳಿ ಯಾರಲ್ಲೂ ಹೋಗಿಲ್ಲ, ಪಕ್ಷದ ವರಿಷ್ಠರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ
|

Updated on: May 12, 2025 | 8:13 PM

ವಿಜಯಪುರದ ಸಂಸದ ರಮೇಶ್ ಜಿಗಜಿಣಗಿ ತಮ್ಮ ಬಗ್ಗೆ ಹೇಳಿರುವ ಮಾತುಗಳಿಗೂ ಬಸನಗೌಡ ಯತ್ನಾಳ್ ಟೀಕಿಸುತ್ತಾರೆ ಮತ್ತು ಅಸೆಂಬ್ಲಿ ಚುನಾವಣೆಯಲ್ಲಿ ತನಗೆ ವಿಜಯಪುರ ನಗರದಲ್ಲಿ ಯಾಕೆ ಕಡಿಮೆ ವೋಟು ಬಂದವು ಅನ್ನೋದಿಕ್ಕೆ ತಮ್ಮದೇ ಆದ ಸಮರ್ಥನೆ ನೀಡುತ್ತಾರೆ. ಕೊನೆಯಲ್ಲಿ ಅವರು ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ ಬಳಿಕ ತನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎನ್ನುತ್ತಾರೆ.

ವಿಜಯಪುರ, ಮೇ 12: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ವರಸೆಯನ್ನು ಮುಂದುವರಿಸಿದ್ದಾರೆ, ಪಕ್ಷಕ್ಕೆ ವಾಪಸ್ಸು ಸೇರಿಸಿಕೊಳ್ಳಿ ಎಂದು ಯಾವನ ಮನೆಗೂ ನಾನು ಹೋಗಿಲ್ಲ, ಅದರ ಅವಶ್ಯಕತೆಯೇ ನನಗಿಲ್ಲ, ಯಾಕೆಂದರೆ ದೆಹಲಿ ವರಿಷ್ಠರೆಲ್ಲ (party seniors) ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಯತ್ನಾಳ್ ಹೇಳಿದರು. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಉಗ್ರರ ದಾಳಿ ನಂತರ ದೆಹಲಿಯ ಬಿಜೆಪಿ ನಾಯಕರೆಲ್ಲ, ಭಯೋತ್ಪಾದಕರನ್ನು ಹತ್ತಿಕ್ಕುವ, ಪಾಕಿಸ್ತಾನಕ್ಕೆ ಪಾಠ ಕಲಿಸುವ, ಅಪರೇಷನ್ ಸಿಂಧೂರ, ಯುದ್ಧ, ಕದನ ವಿರಾಮದ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಯಾವುದೇ ನಾಯಕನಿಗೆ ತನ್ನ ಕುಟುಂಬದ ಜೊತೆ ಮಾತಾಡುವಷ್ಟೂ ವ್ಯವಧಾನವಿಲ್ಲ. ಪರಿಸ್ಥಿತಿ ಹಾಗಿರುವಾಗ ಯತ್ನಾಳ್ ಪಕ್ಷದ ವರಿಷ್ಠರು ತನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನುತ್ತಾರೆ. ಹಿಂದೆ ಈಶ್ವರಪ್ಪ ಸಹ ಹೀಗೆಯೇ ಹೇಳುತ್ತಿದ್ದರು!

ಇದನ್ನು ಓದಿ:  ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಹೆಚ್ಚು ಮಾತಾಡಲು ಬಯಸದ ಡಿಕೆ ಶಿವಕುಮಾರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ