ನಿರ್ದಿಷ್ಟವಾದ ಕಾರು ಬೇಕೆಂದು ನಾನು ಕೇಳಿಲ್ಲ, ಸರ್ಕಾರೀ ಕಾರುಗಳು ನಮ್ಮಪ್ಪನ ಆಸ್ತಿಯಲ್ಲ: ಹೆಚ್ ಡಿ ಕುಮಾರಸ್ವಾಮಿ
ರಾಜ್ಯದ ಕೆಲ ಹೆದ್ದಾರಿಗಳನ್ನು ಮೇಲ್ದರ್ಜೆಗೆ ಏರಿಸುವಂತೆ ಮನವಿ ಮಾಡಲು ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ್ದೇನೆ, ಶ್ರೀರಂಗಪಟ್ಟಣದಿಂದ ಅರಸೀಕೆರೆ ನಡುವಿನ ರಸ್ತೆಯನ್ನು ಅಪ್ಗ್ರೇಡ್ ಮಾಡಬೇಕಿದೆ, ಮಂಡ್ಯದ ರಿಂಗ್ ರಸ್ತೆ ಕಾಮಗಾರಿಗೆ ಚಾಲನೆ ನೀಡಬೇಕಿದೆ ಮತ್ತು 2016ರಲ್ಲಿ ನಿಂತುಹೋಗಿರುವ ರಸ್ತೆ ಕಾಮಗಾರಿಗಳನ್ನು ಪುನಃ ಆರಂಭಿಸಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.
ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಬಳಸಿದ ಕಾರನ್ನು ಉಪಯೋಗಿಸಲ್ಲ ಅಂತ ಯಾವತ್ತೂ ಹೇಳಿಲ್ಲ, ಆ ಕಾರು ಈ ಕಾರು ಅಂತ ಹೇಳಲು ಅದೇನೂ ನಮ್ಮಪ್ಪನ ಆಸ್ತಿಯಲ್ಲ, ನಾನು ಮಮುಖ್ಯಮಂತ್ರಿಯಾದಾಗಲೂ ಸರ್ಕಾರಿ ಕಾರು ಬಳಸಿಲ್ಲ, ಸರ್ಕಾರಿ ಡ್ರೈವರ್ ಇಟ್ಟುಕೊಂಡಿಲ್ಲ ಮತ್ತು ಸರ್ಕಾರದಿಂದ ಸಂಬಳವನ್ನೂ ಪಡೆದಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಾನು ಅಧಿಕಾರದಲ್ಲಿರುವವರೆಗೆ ಒಂದು ಶಾಶ್ವತವಾದ ಕಾರು ಬೇಕೆಂದು ಕೇಳಿದ್ದೇನೆಯೇ ಹೊರತು ನಿರ್ದಿಷ್ಟವಾದ ಕಾರೇ ಬೇಕೆಂದು ಹೇಳಿಲ್ಲ, ಚಲುವರಾಯಸ್ವಾಮಿ ಏನು ಕೇಳಿಸಿಕೊಂಡಿದ್ದಾರೋ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚುನಾವಣಾ ಸಮಯದಲ್ಲಿ ನಮಗೆ ಬೇಕಾದ ಜನ ದುಡ್ಡು ಕೊಡುತ್ತಾರೆ, ಅದನ್ನು ಖರ್ಚು ಮಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

